ಉಡುಪಿ: ಉಡುಪಿಯಲ್ಲಿ ನಡೆದ ಗಾಂಧೀಜಿ 150ರ ಸಮಾವೇಶಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಹಲವಾರು ವಿಚಾರ ಇಟ್ಟುಕೊಂಡು ಬಿಜೆಪಿಯ ನಾಯಕರ ಮೇಲೆ ಮಾತಿನ ಪ್ರಹಾರ ಮಾಡಿದರು.
ಬಿಜೆಪಿಯವರು ಟಿಪ್ಪು ವಿಚಾರವನ್ನು ಪಠ್ಯಕ್ರಮದಿಂದ ತೆಗೆಯುತ್ತಾರೆ. ಇದರಿಂದ ಇತಿಹಾಸವೇ ಅಪೂರ್ಣ ಆಗುತ್ತೆ. ಟಿಪ್ಪು, ಹೈದರಾಲಿ ಇರದ ಮೈಸೂರು ಚರಿತ್ರೆ ಅಪೂರ್ಣ. ಇದೇ ಯಡಿಯೂರಪ್ಪ ಕೆಜೆಪಿ ಕಟ್ಟಿದ್ದಾಗ ಟಿಪ್ಪುವಿನ ಪೇಟ ಹಾಕಿಕೊಂಡು, ಟಿಪ್ಪು ಬಟ್ಟೆ ತೊಟ್ಕೊಂಡು ಪಕ್ಕದಲ್ಲಿ ಶೋಭಾ ನಿಲ್ಲಿಸ್ಕೊಂಡು ಫೊಟೋ ತೆಗಿಸ್ಕೊಂಡಿಲ್ವಾ ಎಂದು ಚಾಟಿ ಬೀಸಿದರು. ಕೆಜೆಪಿಯಲ್ಲಿ ಇದ್ದಾಗ ಇವರಿಗೇನು ಬೇರೆ ನಾಲಿಗೆ ಇತ್ತಾ? ಯಡಿಯೂರಪ್ಪನಿಗೆ ಎಷ್ಟು ನಾಲಿಗೆ ಎಂದು ಪ್ರಶ್ನೆ ಮಾಡಿದ ಮಾಜಿ ಸಿಎಂ, ನಾನು ಟಿಪ್ಪು ಜಯಂತಿ ಮಾತ್ರ ಮಾಡಿಲ್ಲ. ಕಿತ್ತೂರು ರಾಣಿ ಚೆನ್ನಮ್ಮ, ಕೆಂಪೇಗೌಡರ ಜಯಂತಿ ಮಾಡಿದೋನೂ ನಾನೇ ಮಾಡಿರುವುದಾಗಿ ಹೇಳಿದರು.
ಬಿಜೆಪಿಯವರು ನನ್ನ ಬಗ್ಗೆ ಏನೇನೋ ಅಪಪ್ರಚಾರ ಮಾಡುತ್ತಾರೆ. ಸಿದ್ದರಾಮಯ್ಯ ಮುಸಲ್ಮಾನರ ಪರ ಅಂತ ಅಪಪ್ರಚಾರ ಮಾಡುತ್ತಾರೆ. ಯಾಕೆ ನಾನೇನೂ ಹಿಂದೂ ಅಲ್ವಾ. ನಾನೂ ಒಬ್ಬ ಹಿಂದೂ, ಆದರೆ ಇವರ ಹಾಗೆ ಡೋಂಗಿ ಹಿಂದೂವಲ್ಲ ಎಂದು ವಾಗ್ದಾಳಿ ನಡೆಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…