ಉಡುಪಿ

ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ದೇವರೇ ನನ್ನನ್ನು ತಡೆದರು : ಪ್ರಮೋದ್ ಮಧ್ವರಾಜ್

ಉಡುಪಿ: ಚರ್ಚ್ ನಾಶ ಮಾಡಿದ್ದಂತಹ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ದೇವರೇ ನನ್ನನ್ನು ತಡೆದರು’ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್  ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದೆ.

ಡಿ.10ರಂದು ಬ್ರಹ್ಮಾವರದ ಪೇತ್ರಿ ಸೇಂಟ್ ಪೀಟರ್ಸ್ ಚರ್ಚ್‌ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಮೋದ್‌ ಮಧ್ವರಾಜ್‌ ಈ ಹೇಳಿಕೆ ನೀಡಿದ್ದರು. ‘ಟಿಪ್ಪು ಸುಲ್ತಾನ್ ಸೈನ್ಯ ಪೇತ್ರಿ ಚರ್ಚ್‌ ಮೇಲೆ ದಾಳಿ ಮಾಡಿ ನಾಶಮಾಡಿತ್ತು ಎಂಬ ಅಂಶ ಇತಿಹಾಸದಲ್ಲಿದೆ. ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದ್ದು ಸರಿಯೋ ತಪ್ಪೊ ಗೊತ್ತಿಲ್ಲ. ಆದರೆ, ಟಿಪ್ಪು ಜಯಂತಿಯಲ್ಲಿ ಭಾಗವಹಿಸಲು ಅವಕಾಶ ಸಿಗಲಿಲ್ಲ’ ಎಂದು ಮಧ್ವರಾಜ್ ಹೇಳಿರುವುದು ವಿಡಿಯೋದಲ್ಲಿದೆ.

‘ವಿರೋಧವಿದ್ದರೂ ಕೂಡ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಿರುವುದು ಸರಿಯೋ ತಪ್ಪೋ ಗೊತ್ತಿಲ್ಲ. ಆದರೆ ಟಿಪ್ಪು ಸೈನ್ಯ ಪೇತ್ರಿಯ ಹಿಂದಿನ ಚರ್ಚ್ ನಾಶ ಮಾಡಿದ್ದಕ್ಕಾಗಿ ನಾನು ಶಾಸಕ ಹಾಗೂ ಮಂತ್ರಿಯಾಗಿದ್ದಾಗ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ದೇವರು ಮಾಡಿದ್ದಾರೆ ಎಂದು ಭಾಷಣದಲ್ಲಿ ಪ್ರಮೋದ್ ಹೇಳಿದ್ದರು. ಯಾವುದೇ ವರ್ಷವೂ ಕೂಡ ಟಿಪ್ಪು ಜಯಂತಿಯಲ್ಲಿ ಭಾಗವಹಿಸಲು ನನಗೆ ಅವಕಾಶವೇ ಸಿಕ್ಕಿರಲಿಲ್ಲ ಎಂದಿದ್ದಾರೆ.

ಕಾಂಗ್ರೇಸ್ ಸರ್ಕಾರ ಆಡಳಿತ ಇದ್ದಾಗ ನಡೆದ ಮೂರು ಟಿಪ್ಪು ಜಯಂತಿಯಲ್ಲೂ ಪ್ರಮೋದ್ ಮಧ್ವರಾಜ್ ಭಾಗವಹಿಸಿರಲಿಲ್ಲ. ಈ ಧೋರಣೆ ಅವರ ಪಕ್ಷದವರೂ ಸೇರಿದಂತೆ ಮುಸ್ಲೀಂ ಸಮುದಾಯದ ಮುಖಂಡರ ಮುನಿಸಿಗೂ ಕಾರಣವಾಗಿತ್ತು.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

23 minutes ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

55 minutes ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

1 hour ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

1 hour ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

1 hour ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

2 hours ago