ಬಾಗಲಕೋಟೆ: ‘ಬಿಜೆಪಿಯವರ ಢೋಂಗಿ ಬೆದರಿಕೆಗೆ ನಾವು ಸೊಪ್ಪು ಹಾಕುವುದಿಲ್ಲ, ಟಿಪ್ಪು ಜಯಂತಿಯನ್ನು ಮತ್ತೆ ಆಚರಿಸಿ ತೋರಿಸುತ್ತೇವೆ’ ಎಂದು ಮಾಜಿ ಸಿಎಂ, ಬಾದಾಮಿ ಶಾಸಕ ಸಿದ್ದರಾಮಯ್ಯ ಸವಾಲು ಹಾಕಿದರು.
ಜಿಲ್ಲೆಯ ಬಾದಾಮಿಯಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಯಿಂದ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ‘ಟಿಪ್ಪು ಜಯಂತಿಗೆ ಢೋಂಗಿ ಬಿಜೆಪಿಯವರು ವಿರೋಧ ಒಡ್ಡುತ್ತಾರೆ. ಎಲ್ಲ ಧರ್ಮಗಳ ನಾಯಕರಾಗಿದ್ದ ಟಿಪ್ಪು ಶೃಂಗೇರಿ ಶಾರದಾಂಬೆ ದೇವಾಲಯಕ್ಕೂ ಕೊಡುಗೆ ನೀಡಿದ್ದಾರೆ. ಟಿಪ್ಪು ಆಸ್ಥಾನದಲ್ಲಿ ದಿವಾನರಾಗಿದ್ದ ಪೂರ್ಣಯ್ಯ ಬ್ರಾಹ್ಮಣರು, ಕೃಷ್ಣರಾವ್ ಹಣಕಾಸು ಸಚಿವರಾಗಿದ್ದರು. ಟಿಪ್ಪು ದೇಶ ಹಾಗೂ ಸ್ವಾತಂತ್ರ್ಯ ಪ್ರೇಮಿಯಾಗಿದ್ದಾರೆ. ಯಾರು ಹೇಳಿದರೂ ನಾವು ಕೇಳುವುದಿಲ್ಲ, ಇತರ ಜಯಂತಿಗಳನ್ನು ಆಚರಿಸಿದಂತೆ ಟಿಪ್ಪು ಜಯಂತಿ ನಡೆಸುತ್ತೇವೆ. ಟಿಪ್ಪು ಮತಾಂಧನಲ್ಲ’ ಎಂದು ಸಮರ್ಥಿಸಿಕೊಂಡರು.
ನಾನು ಸಿಎಂ ಆಗಿದ್ದರೆ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೆರವು : ‘ನಾನು ಮುಖ್ಯಮಂತ್ರಿಯಿದ್ದಾಗ ಅಲ್ಪಸಂಖ್ಯಾತ ಸಮುದಾಯಕ್ಕೆ 400 ಕೋಟಿ ರೂ.ಗಳಷ್ಟಿದ್ದ ಅನುದಾನವನ್ನು 3, 100 ಕೋಟಿ ರೂ.ಗಳಿಗೆ ಹೆಚ್ಚಿಸಿದೆ. ಇನ್ನೂ ಮುಖ್ಯಮಂತ್ರಿಯಾಗಿ ಮುಂದುವರಿದಿದ್ದರೆ ಅನುದಾನ 10 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸುತ್ತಿದ್ದೆ. ಶಾದಿ ಭಾಗ್ಯ ಯೋಜನೆ ಜಾರಿಗೊಳಿಸಿದಾಗ ಬಿಜೆಪಿಯವರು ಪ್ರತಿಭಟಿಸಿದರು.
“ಸಿದ್ದರಾಮಯ್ಯ ಮುಸಲ್ಮಾನರ ಪರ ಎಂದು ಬಿಜೆಪಿಯವರು ನನ್ನನ್ನು ಬ್ರ್ಯಾಂಡ್ ಮಾಡಲು ಯತ್ನಿಸಿದರು, ನಾನು ಇದಕ್ಕೆಲ್ಲ ಹೆದರುವುದಿಲ್ಲ. ನಾನು ಹಿಂದು, ಮುಸ್ಲಿಂ ಸೇರಿದಂತೆ ಸಮಾಜದ ಬಡವರ ಪರವಾಗಿದ್ದೇನೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಬಿಜೆಪಿ ಶೇ.14 ರಷ್ಟಿರುವ ಮುಸ್ಲಿಮರು, ಶೇ.2 ರಷ್ಟಿರುವ ಕ್ರಿಶ್ಚಿಯನ್ರನ್ನು ಮರೆತಿದೆ. ಒಬ್ಬ ಹಿಂದುವಿಗೆ ಕಾಯಿಲೆ ಬಂದಾಗ ಮುಸ್ಲಿಂ ವ್ಯಕ್ತಿ ರಕ್ತ ನೀಡಿದರೆ ಬೇಡ ಎನ್ನುತ್ತೀವಾ?. ಧರ್ಮಗಳ ಮಧ್ಯೆ ಗೋಡೆ ಕಟ್ಟುವ ಕೆಲಸ ಮಾಡಬಾರದು. ನಾನು ಬದುಕಬೇಕು, ಬೇರೆಯವರೂ ಬದುಕಬೇಕು ಎಂಬ ಭಾವನೆಯಿರಬೇಕು. ದೇಶದ ಸಂಪತ್ತು ಒಂದು ಧರ್ಮದವರಿಗೆ ಸೇರಿಲ್ಲ, ಅದು ಎಲ್ಲ ಧರ್ಮದವರದ್ದಾಗಿದೆ’ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…