ಬೆಂಗಳೂರು: ಬಿಜೆಪಿ ಸರ್ಕಾರ ಟಿಪ್ಪು ಜಯಂತಿಯ ಆಚರಣೆಯನ್ನು ರದ್ದುಗೊಳಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಟಿಪ್ಪು ಜಯಂತಿಯ ಆಚರಣೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ನಾವು ಆಚರಣೆ ಮಾಡೇ ಮಾಡ್ತೆವೆ ಎಂದು ಸಿಎಂ ವಿರುದ್ಧ ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮತನಾಡಿದ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಟಿಪ್ಪು ಜಯಂತಿಯನ್ನು ಬಿಜೆಪಿ ರದ್ದು ಮಾಡುತ್ತದೆ ಎಂದು ಗೊತ್ತಿತ್ತು. ಆದರೆ ಇಷ್ಟು ಬೇಗ ರದ್ದು ಮಾಡುತ್ತದೆ ಎಂದು ಗೊತ್ತಿರಲಿಲ್ಲ. ರದ್ದು ಪಡಿಸುವ ಪ್ರಕ್ರಿಯೆಗೆ ಕ್ಯಾಬಿನೆಟ್ನಲ್ಲಿ ನಿರ್ಧಾರ ಆಗಬೇಕು. ಆ ನಿರ್ಧಾರದ ಮೇಲೆ ರದ್ದು ಪಡಿಸಬೇಕಾಗುತ್ತದೆ ಆದರೆ ಇವರು ಹೇಗೆ ರದ್ದು ಪಡಿಸಿದ್ದಾರೆ ಎಂಬುವುದು ಗೊತ್ತಿಲ್ಲ ಎಂದು ಹೇಳಿದ್ದಾರೆ.
ಹೇಗೆ ನಿಷೇಧ ಮಾಡಿದ್ದೀರಿ ಎಂದು ರೋಷನ್ ಬೇಗ್ ಕೇಳಬೇಕು. ಕಾಂಗ್ರೆಸ್ ಬಿಟ್ಟು ಬಿಜೆಪಿ ಹೋಗ್ತಿದ್ದಾರೆ. ಎಲ್ಲಾ ಧರ್ಮದವರು ಟಿಪ್ಪು ಜಯಂತಿ ಆಚರಿಸಿಕೊಂಡು ಬಂದಿದ್ದಾರೆ. ಎಲ್ಲಾ ಕಡೆ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ. ಇನ್ನೂ ಮುಂದೆ ಮತ್ತಷ್ಟು ಜೋರಾಗಿ ಆಚರಿಸುತ್ತೇವೆ ಎಂದರು.
ಈ ಹಿಂದೆ ಕೊಡಗಿನಲ್ಲಿ ಟಿಪ್ಪು ಜಯಂತಿಯಿಂದ ಹಲವಾರು ಗಲಭೆಗಳು ಸೃಷ್ಠಿಯಾಗಿದ್ದು, ಈ ಕಾರಣದಿಂದಾಗಿ ಅಲ್ಲಿನ ಶಾಸಕ ಬೋಪಯ್ಯನವರು ಟಿಪ್ಪು ಜಯಂತಿಯನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೀಗ ಬೋಪಯ್ಯನವರ ಮನವಿಗೆ ಸ್ಪಂದಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪನವರು ಟಿಪ್ಪು ಜಯಂತಿ ರದ್ದುಗೊಳಿಸಿ ಎಂದು ಆದೇಶ ಹೊರಡಿಸಿದ್ಧಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…