ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಿದ್ದ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸುವಂತೆ ವಿರಾಜಪೇಟೆಯ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಟಿಪ್ಪು ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸಲು ಆರಂಭವಾದಾಗಿನಿಂದ ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ಸಾವು-ನೋವು ಸಂಭವಿಸಿವೆ. ಸರ್ಕಾರಿ ಆಸ್ತಿಪಾಸ್ತಿಗೆ ಹಾನಿಯಾಗುತ್ತಿದೆ. ಹೀಗಾಗಿ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ನಿರ್ಧರಿಸಿ, ಈ ಸಂಬಂಧ ಆದೇಶ ಹೊರಡಿಸಲಾಯಿತು. ಇದು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿತ್ತು.
ಬಿಜೆಪಿ ಕಾರ್ಯಕ್ರಮವನ್ನು ಬಹಿಷ್ಕರಿಸಿ ಪ್ರತಿಭಟನೆಯನ್ನು ರಾಜ್ಯಾದ್ಯಂತ ಹಮ್ಮಿಕೊಂಡಿತ್ತು. ಆದರೆ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿಯನ್ನು ಆಚರಿಸುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ. ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೂಡ ಟಿಪ್ಪು ಜಯಂತಿಯನ್ನು ಮುಂದುವರಿಸಿದ್ದರು. ಇದೀಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಈ ಹಿಂದೆಯೇ ಬಿಜೆಪಿ ಮುಖಂಡರು, ಪಕ್ಷ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ರದ್ದುಪಡಿಸುವುದಾಗಿ ಹೇಳಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…