ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಿದ್ದ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸುವಂತೆ ವಿರಾಜಪೇಟೆಯ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಟಿಪ್ಪು ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸಲು ಆರಂಭವಾದಾಗಿನಿಂದ ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ಸಾವು-ನೋವು ಸಂಭವಿಸಿವೆ. ಸರ್ಕಾರಿ ಆಸ್ತಿಪಾಸ್ತಿಗೆ ಹಾನಿಯಾಗುತ್ತಿದೆ. ಹೀಗಾಗಿ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ನಿರ್ಧರಿಸಿ, ಈ ಸಂಬಂಧ ಆದೇಶ ಹೊರಡಿಸಲಾಯಿತು. ಇದು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿತ್ತು.
ಬಿಜೆಪಿ ಕಾರ್ಯಕ್ರಮವನ್ನು ಬಹಿಷ್ಕರಿಸಿ ಪ್ರತಿಭಟನೆಯನ್ನು ರಾಜ್ಯಾದ್ಯಂತ ಹಮ್ಮಿಕೊಂಡಿತ್ತು. ಆದರೆ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿಯನ್ನು ಆಚರಿಸುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ. ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೂಡ ಟಿಪ್ಪು ಜಯಂತಿಯನ್ನು ಮುಂದುವರಿಸಿದ್ದರು. ಇದೀಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಈ ಹಿಂದೆಯೇ ಬಿಜೆಪಿ ಮುಖಂಡರು, ಪಕ್ಷ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ರದ್ದುಪಡಿಸುವುದಾಗಿ ಹೇಳಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…