ಬೆಂಗಳೂರು : ದ್ವೇಷ ರಾಜಕಾರಣ ಮಾಡುವುದಿಲ್ಲವೆಂದು ಹೇಳಿದ 24 ಗಂಟೆಯೊಳಗೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಟಿಪ್ಪು ಜಯಂತಿಯನ್ನು ರದ್ದು ಮಾಡುವ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ವಚನ ಭಷ್ಟ್ರರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದೆ.
ಸಿಎಂ ಯಡಿಯೂರಪ್ಪ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಟಿಪ್ಪು ಜಯಂತಿ ರದ್ದು ಮಾಡಿದ್ದು ಅಪರಾಧ. ಟಿಪ್ಪು ಸುಲ್ತಾನ್ ಒಬ್ಬ ಅಲ್ಪಸಂಖ್ಯಾತ. ಮೈಸೂರು ರಾಜ್ಯದಲ್ಲಿ ರಾಜನಾಗಿ ಬ್ರಿಟಿಷರ ವಿರುದ್ಧ ಹೋರಾಡಿದವನು ಟಿಪ್ಪು. ಈ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ಅವರ ಜಯಂತಿಯನ್ನು ಆಚರಣೆ ಮಾಡಲು ತೀರ್ಮಾನ ಮಾಡಿದ್ದೆವು. ಇತಿಹಾಸದ ಅರಿವಿಲ್ಲದ ಬಿಜೆಪಿಯವರು ದುರುದ್ದೇಶದಿಂದ ಅಲ್ಪಸಂಖ್ಯಾತರ ದ್ವೇಷದಿಂದ ಈ ರೀತಿ ಮಾಡಿದ್ದಾರೆ ಎಂದು ಹರಿಹಾಯ್ದರು.
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಟಿಪ್ಪು ಜಯಂತಿಯನ್ನು ರದ್ದು ಮಾಡಿ ನೂತನ ಬಿಜೆಪಿ ಸರ್ಕಾರ ಆದೇಶಿದೆ. ಈ ಕುರಿತು ಮಾತನಾಡಿರುವ ಸಿಎಂ ಯಡಿಯೂರಪ್ಪ, ಹಿಂದೆಲ್ಲಾ ಟಿಪ್ಪು ಜಯಂತಿ ಸಂದರ್ಭದಲ್ಲಿ ಅಲ್ಲಲ್ಲಿ ಗಲಾಟೆ, ಘರ್ಷಣೆಗಳಾಗಿತ್ತು. ಅದು ಪುನರಾವರ್ತನೆಯಾಗಬಾರದೆಂದು ಶಾಸಕರ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಯಂತಿ ಆಚರಣೆ ರದ್ದು ಮಾಡಲು ಮುಂದಾಗಿವೆ ಎಂದಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…