ಬೆಂಗಳೂರು,:ಟಿಪ್ಪುಜಯಂತಿಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ಹೋರಾಟಕ್ಕಿಳಿಯಲು ಮುಂದಾಗಿದೆ.
ಕಳೆದ ಐದಾರು ವರ್ಷಗಳಿಂದಲೂ ನಿರಂತರವಾಗಿ ನಡೆದು ಬರುತ್ತಿದ್ದ ಟಿಪ್ಪುಜಯಂತಿಯನ್ನು ರದ್ದುಗೊಳಿಸುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಬ್ರಾತೃತ್ವ, ಭಾವೈಕ್ಯತೆಗೆ ಧಕ್ಕೆಯುಂಟು ಮಾಡಿದೆ.
ಜತೆಗೆ ದ್ವೇಶದ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಳೆದ ಒಂದು ವಾರದಿಂದ ರಾಜಕೀಯ ಬೆಳವಣಿಗೆಗಳಲ್ಲಿ ಮುಳುಗಿದ್ದ ಕಾಂಗ್ರೆಸ್ ಇಂದು ಕೆಪಿಸಿಸಿಯಲ್ಲಿ ಮಹತ್ವದ ಸಭೆ ನಡೆಸಿತು.
ರಾಜೀನಾಮೆ ನೀಡಿ ಪಕ್ಷಾಂತರ ಮಾಡಿರುವ 17 ಮಂದಿ ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಲು ಕಾರ್ಯಯೋಜನೆ ರೂಪಿಸುತ್ತಿರುವ ಕಾಂಗ್ರೆಸ್ ಅದೇ ಸಮಯದಲ್ಲಿ ಟಿಪ್ಪು ಜಯಂತಿ ರದ್ದುಗೊಳಿಸಿರುವ ನಿರ್ಧಾರವನ್ನು ಪ್ರತಿಭಟಿಸುವ ಮೂಲಕ ಬಿಜೆಪಿ ಸರ್ಕಾರಕ್ಕೆ ಟಾಂಗ್ ನೀಡಲು ಮುಂದಾಗಿದೆ.
ಇಂದು ನಡೆದ ಸಭೆಯಲ್ಲಿ ಬಹುತೇಕ ನಾಯಕರು ಟಿಪ್ಪು ಜಯಂತಿ ರದ್ದುಗೊಳಿಸಿರುವುದನ್ನು ಪ್ರಬಲವಾಗಿ ವಿರೋಧಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…