ಬೆಂಗಳೂರು,:ಟಿಪ್ಪುಜಯಂತಿಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ಹೋರಾಟಕ್ಕಿಳಿಯಲು ಮುಂದಾಗಿದೆ.
ಕಳೆದ ಐದಾರು ವರ್ಷಗಳಿಂದಲೂ ನಿರಂತರವಾಗಿ ನಡೆದು ಬರುತ್ತಿದ್ದ ಟಿಪ್ಪುಜಯಂತಿಯನ್ನು ರದ್ದುಗೊಳಿಸುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಬ್ರಾತೃತ್ವ, ಭಾವೈಕ್ಯತೆಗೆ ಧಕ್ಕೆಯುಂಟು ಮಾಡಿದೆ.
ಜತೆಗೆ ದ್ವೇಶದ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಳೆದ ಒಂದು ವಾರದಿಂದ ರಾಜಕೀಯ ಬೆಳವಣಿಗೆಗಳಲ್ಲಿ ಮುಳುಗಿದ್ದ ಕಾಂಗ್ರೆಸ್ ಇಂದು ಕೆಪಿಸಿಸಿಯಲ್ಲಿ ಮಹತ್ವದ ಸಭೆ ನಡೆಸಿತು.
ರಾಜೀನಾಮೆ ನೀಡಿ ಪಕ್ಷಾಂತರ ಮಾಡಿರುವ 17 ಮಂದಿ ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಲು ಕಾರ್ಯಯೋಜನೆ ರೂಪಿಸುತ್ತಿರುವ ಕಾಂಗ್ರೆಸ್ ಅದೇ ಸಮಯದಲ್ಲಿ ಟಿಪ್ಪು ಜಯಂತಿ ರದ್ದುಗೊಳಿಸಿರುವ ನಿರ್ಧಾರವನ್ನು ಪ್ರತಿಭಟಿಸುವ ಮೂಲಕ ಬಿಜೆಪಿ ಸರ್ಕಾರಕ್ಕೆ ಟಾಂಗ್ ನೀಡಲು ಮುಂದಾಗಿದೆ.
ಇಂದು ನಡೆದ ಸಭೆಯಲ್ಲಿ ಬಹುತೇಕ ನಾಯಕರು ಟಿಪ್ಪು ಜಯಂತಿ ರದ್ದುಗೊಳಿಸಿರುವುದನ್ನು ಪ್ರಬಲವಾಗಿ ವಿರೋಧಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…