ಬೆಂಗಳೂರು,: ಟಿಪ್ಪು ಜಯಂತಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ತ್ರಿವಳಿ ತಲಾಖ್ ಬಗ್ಗೆ ಮೌನವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು, ಹಿರಿಯ ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಈಶ್ವರಪ್ಪ ಬರೆದುಕೊಂಡಿದ್ದು ಹೀಗೆ, ” ಶಾದಿಭಾಗ್ಯ’ವನ್ನು ಶಾಶ್ವತವಾಗಿ ಉಳಿಸುವ ಟ್ರಿಪಲ್ ತಲಾಕ್ ಬಿಲ್ ರಾಜ್ಯಸಭೆಯಲ್ಲಿ ಪಾಸ್ ಆಗಿ 12 ಗಂಟೆಗಳು ಕಳೆದರೂ, ಮಾಜಿ ಮುಖ್ಯಮಂತ್ರಿಗಳ ಜಾಣ ಕಿವುಡು ಕೆಲಸ ಮಾಡಿದೆ”.
“ಮತಾಂಧನ ಜಯಂತಿ ರದ್ದು ಮಾಡಿದಾಗ ಉಕ್ಕಿ ಬಂದ ರೋಷಾವೇಷಗಳು, ಮುಸ್ಲಿಂ ಮಹಿಳೆಯರ ಗೌರವ ಉಳಿಸುವ ಟ್ರಿಪಲ್ ತಲಾಕ್ ಬಿಲ್ ಪಾಸ್ ಆದ ಕೂಡಲೇ ತಣ್ಣಗಾಗಿದೆ” ಈಶ್ವರಪ್ಪ ಟ್ವೀಟ್ ಮಾಡಿದ್ದಾರೆ.
“ದ್ವೇಷ ರಾಜಕಾರಣ ಮಾಡುವುದಿಲ್ಲವೆಂದು ಹೇಳಿ 24 ಗಂಟೆಯೊಳಗೆ ದ್ವೇಷ ರಾಜಕಾರಣ ಮಾಡಿದ ವಚನ ಭ್ರಷ್ಟ @BSYBJP. ಕೇವಲ ಕೋಮುವಾದ ದೃಷ್ಟಿಕೋನದಿಂದಲೇ ಇತಿಹಾಸವನ್ನು ನೋಡುವ ಬಿಜೆಪಿ/ಆರೆಸ್ಸೆಸ್ ಇತಿಹಾಸವನ್ನು, ಟಿಪ್ಪುವಿನ ಕೊಡುಗೆಯನ್ನು ಓದಿ ತಿಳಿದುಕೊಳ್ಳಬೇಕಿದೆ” ಎಂದು ಕೆಪಿಸಿಸಿ ಟ್ವೀಟ್ ಮಾಡಿತ್ತು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…