ಬೆಂಗಳೂರು, : ಟಿಪ್ಪು ಜಾತ್ಯಾತೀತ ದೊರೆ ಹಾಗೂ ಒಬ್ಬ ಜನನಾಯಕ ಆಗಿದ್ದ. ಇತಿಹಾಸ ಪುರುಷರನ್ನು ಧರ್ಮದ ಆಧಾರದ ಮೇಲೆ ದ್ವೇಷಿಸುವ ಆರ್.ಎಸ್.ಎಸ್ನವರ ಮಾತುಗಳಿಗೆ ‘ಐ ಡೋಂಟ್ ಕೇರ್’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಟಿಪ್ಪು ಜಯಂತಿ ಪ್ರಯುಕ್ತ ಶುಭಕೋರಲು ಮಾಜಿ ಸಚಿವ ಜಮೀರ್ ಅಹಮದ್ ನೇತೃತ್ವದಲ್ಲಿ ತಮ್ಮ ನಿವಾಸಕ್ಕೆ ಮುಸ್ಲಿಂ ಮುಖಂಡರು ಆಗಮಿಸಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, “ಟಿಪ್ಪು ಜಾತ್ಯಾತೀತ ದೊರೆ ಹಾಗೂ ಒಬ್ಬ ಜನನಾಯಕ ಆಗಿದ್ದ. ಟಿಪ್ಪು ಒಬ್ಬ ಹಿಂದೂ ವಿರೋಧಿಯಾಗಿದ್ದರೆ ತನ್ನ ಆಸ್ಥಾನದಲ್ಲಿ ಹಿಂದೂಗಳನ್ನು ದೀವಾನರಾಗಿ, ಮಂತ್ರಿಗಳಾಗಿ ಇಟ್ಟುಕೊಳ್ಳುತ್ತಿದ್ದನೇ?. ಉಳುವವನೇ ಭೂಮಿಯ ಒಡೆಯ ಕಾನೂನನ್ನು ಮೊದಲಿಗೆ ಜಾರಿಗೆ ತಂದಿದ್ದು ಹೈದರಾಲಿ. ಕನ್ನಂಬಾಡಿ ಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್. ಹೀಗೆ ನಾಡಿಗೆ ಟಿಪ್ಪು ಮತ್ತು ಹೈದರಾಲಿ ಕೊಡುಗೆ ಅಪಾರವಾದುದ್ದು” ಎಂದಿದ್ದಾರೆ.
“ಟಿಪ್ಪು ಎಲ್ಲೆಲ್ಲಿ ಮಸೀದಿ ಕಟ್ಟಿಸಿದ್ದರೋ ಅದರ ಪಕ್ಕದಲ್ಲೇ ದೇವಸ್ಥಾನಗಳನ್ನೂ ಕಟ್ಟಿಸುತ್ತಿದ್ದರು ಎನ್ನುವುದಕ್ಕೆ ದಾಖಲೆಗಳಿವೆ. ಧರ್ಮದ ಕಾರಣಕ್ಕೆ ಟಿಪ್ಪುವನ್ನು ವಿರೋಧಿಸುವ ಆರ್ಎಸ್ಎಸ್ ಎಂದಾದರೂ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದೆಯೇ? ಬ್ರಿಟಿಷರ ವಿರುದ್ಧ ಹೋರಾಟದಲ್ಲಿ ಯಾರಾದರೂ ಆರ್ಎಸ್ಎಸ್ ನವರು ಪ್ರಾಣ ಬಿಟ್ಟ ಉದಾಹರಣೆಗೆ ಇದೆಯಾ?” ಎಂದು ಪ್ರಶ್ನಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…