ಬೆಂಗಳೂರು, : ಟಿಪ್ಪು ಜಾತ್ಯಾತೀತ ದೊರೆ ಹಾಗೂ ಒಬ್ಬ ಜನನಾಯಕ ಆಗಿದ್ದ. ಇತಿಹಾಸ ಪುರುಷರನ್ನು ಧರ್ಮದ ಆಧಾರದ ಮೇಲೆ ದ್ವೇಷಿಸುವ ಆರ್.ಎಸ್.ಎಸ್ನವರ ಮಾತುಗಳಿಗೆ ‘ಐ ಡೋಂಟ್ ಕೇರ್’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಟಿಪ್ಪು ಜಯಂತಿ ಪ್ರಯುಕ್ತ ಶುಭಕೋರಲು ಮಾಜಿ ಸಚಿವ ಜಮೀರ್ ಅಹಮದ್ ನೇತೃತ್ವದಲ್ಲಿ ತಮ್ಮ ನಿವಾಸಕ್ಕೆ ಮುಸ್ಲಿಂ ಮುಖಂಡರು ಆಗಮಿಸಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, “ಟಿಪ್ಪು ಜಾತ್ಯಾತೀತ ದೊರೆ ಹಾಗೂ ಒಬ್ಬ ಜನನಾಯಕ ಆಗಿದ್ದ. ಟಿಪ್ಪು ಒಬ್ಬ ಹಿಂದೂ ವಿರೋಧಿಯಾಗಿದ್ದರೆ ತನ್ನ ಆಸ್ಥಾನದಲ್ಲಿ ಹಿಂದೂಗಳನ್ನು ದೀವಾನರಾಗಿ, ಮಂತ್ರಿಗಳಾಗಿ ಇಟ್ಟುಕೊಳ್ಳುತ್ತಿದ್ದನೇ?. ಉಳುವವನೇ ಭೂಮಿಯ ಒಡೆಯ ಕಾನೂನನ್ನು ಮೊದಲಿಗೆ ಜಾರಿಗೆ ತಂದಿದ್ದು ಹೈದರಾಲಿ. ಕನ್ನಂಬಾಡಿ ಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್. ಹೀಗೆ ನಾಡಿಗೆ ಟಿಪ್ಪು ಮತ್ತು ಹೈದರಾಲಿ ಕೊಡುಗೆ ಅಪಾರವಾದುದ್ದು” ಎಂದಿದ್ದಾರೆ.
“ಟಿಪ್ಪು ಎಲ್ಲೆಲ್ಲಿ ಮಸೀದಿ ಕಟ್ಟಿಸಿದ್ದರೋ ಅದರ ಪಕ್ಕದಲ್ಲೇ ದೇವಸ್ಥಾನಗಳನ್ನೂ ಕಟ್ಟಿಸುತ್ತಿದ್ದರು ಎನ್ನುವುದಕ್ಕೆ ದಾಖಲೆಗಳಿವೆ. ಧರ್ಮದ ಕಾರಣಕ್ಕೆ ಟಿಪ್ಪುವನ್ನು ವಿರೋಧಿಸುವ ಆರ್ಎಸ್ಎಸ್ ಎಂದಾದರೂ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದೆಯೇ? ಬ್ರಿಟಿಷರ ವಿರುದ್ಧ ಹೋರಾಟದಲ್ಲಿ ಯಾರಾದರೂ ಆರ್ಎಸ್ಎಸ್ ನವರು ಪ್ರಾಣ ಬಿಟ್ಟ ಉದಾಹರಣೆಗೆ ಇದೆಯಾ?” ಎಂದು ಪ್ರಶ್ನಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…