ಬೆಂಗಳೂರು: ಟಿಪ್ಪು ವಿಚಾರದಲ್ಲಿ ದೇಶದ ಇತಿಹಾಸವನ್ನು ಯಾರು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ತಿಳಿಸಿದರು.
ಪಠ್ಯಪುಸ್ತಕದಲ್ಲಿ ಟಿಪ್ಪು ವಿಚಾರ ಕೈ ಬಿಡುವ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಪ್ರತಿಕ್ರಿಯೆ ಕೊಟ್ಟ ಡಿಕೆಶಿ, ಇತಿಹಾಸವನ್ನು ಯಾರು ಬದಲಿಸಲು ಸಾಧ್ಯವಿಲ್ಲ. ಈ ದೇಶದ ರಾಷ್ಟ್ರಪತಿಗಳೇ ಟಿಪ್ಪು ಬಗ್ಗೆ ಕಳೆದ ಬಾರಿ ಸದನದಲ್ಲಿ ಹಾಡಿ ಹೊಗಳಿದ್ದಾರೆ. ಸಮಿತಿಯಲ್ಲಿ ಇರುವವರು ಪ್ರಜ್ಞೆ ಇರುವವರು. ಯಾರೂ ಕೂಡ ತಿರುಚೋಕ್ಕೆ ಆಗಲ್ಲ ಎಂದು ಉತ್ತರಿಸಿದರು.
ಟಿಪ್ಪುಗೆ ‘ಮೈಸೂರು ಹುಲಿ’ ಎಂಬ ಬಿರುದು ಗೊಂದಲ ಯಾಕೆ? ಬಿಜೆಪಿ ಅವರು ಲಂಡನ್ ಮ್ಯೂಸಿಯಂಗೆ ಹೋಗಿ ನೋಡ್ಲಿ. ಮೈಸೂರು ಹುಲಿ ಬಿರುದು ನಾವು ಕೊಟ್ಟಿದ್ದಲ್ಲ. ಬ್ರಿಟೀಷರು ಬಿರುದು ಕೊಟ್ಟಿದ್ದು, ಕಾಂಗ್ರೆಸ್ ಕೊಟ್ಟಿದ್ದಲ್ಲ. ಸ್ವತಂತ್ರ ಪೂರ್ವದಲ್ಲೆ ಬ್ರಿಟೀಷರು ಕೊಟ್ಟ ಬಿರುದು ಎಂದರು.
ಹೋಗಿ ಯಾಕೆ ಕೊಟ್ರಿ ಅಂತ ಬ್ರಿಟೀಷರನ್ನ ಕೇಳ್ತೇವಿ ಇರಿ. ರಾಷ್ಟ್ರಪತಿಗಳು ಟಿಪ್ಪು ಬಗ್ಗೆ ಓದಿ ಹೋಗಿದ್ದರು. ಟಿಪ್ಪು ಯಾರು ಅನ್ನೋದು ಎಲ್ಲರಿಗೂ ಗೊತ್ತಿದೆ. ಟಿಪ್ಪು ಬಗ್ಗೆ ಶೃಂಗೇರಿ ಮಠಕ್ಕೆ ಹೋಗಿ ಕೇಳಲಿ ಕೊಲ್ಲೂರಿನಲ್ಲಿ ತಿಳಿದುಕೊಳ್ಳಲಿ ಎಂದು ತಿರುಗೇಟು ಕೊಟ್ಟರು.
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್ನಿಂದ ಮಾಫಿ ಸಾಕ್ಷಿಗೆ ಅರ್ಜಿ ನಾನು ಸತ್ಯವನ್ನೇ ಹೇಳುತ್ತೇನೆ.. ಮಾಫಿ ಸಾಕ್ಷಿಯಾಗಿ ಪರಿಗಣಿಸಿ…
ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು ಮಂಗಳೂರು: ಸುರತ್ಕಲ್ ಸಮೀಪದ ಕೋಟೆ…
ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ…