ಉಡುಪಿ: ಟಿಪ್ಪು ಹೆಸರಿನಲ್ಲಿ ದೇವರಿಗೆ ಪೂಜೆ ಮಾಡುವುದು ಸರಿಯಲ್ಲ. ಅದು ದೇವರಿಗೆ ಮಾಡುವ ಅಪಮಾನ. ಇದರಿಂದ ದೇವರ ಶಕ್ತಿ ಕಡಿಮೆಯಾಗುತ್ತದೆ ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
ಶೃಂಗೇರಿಯ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ನಡೆಯುವ ಸಲಾಂ ಆರತಿ ಪೂಜೆಗೆ ಸಂಬಂಧಿಸಿದಂತೆ ಉಡುಪಿಯ ಬೈಂದೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಲಾಂ ತೆಗೆದು ದೇವರ ಹೆಸರಿನಲ್ಲಿ ಪೂಜೆ ಮಾಡಿ ಎಂದು ಆಗ್ರಹಿಸಿದ್ದಾರೆ.
ಟಿಪ್ಪು ನಮ್ಮ ಹಿಂದೂ ದೇವರನ್ನು ಅವಹೇಳನ ಮಾಡಿದ್ದಾನೆ. ಹಿಂದೂ ಸಮಾಜವನ್ನು ನಾಶ ಮಾಡಿದ್ದಾನೆ. ಇಂತಹ ಒಬ್ಬ ವ್ಯಕ್ತಿಯ ಹೆಸರಿನಲ್ಲಿ ದೇವರಿಗೆ ಪೂಜೆ ಮಾಡುವುದು ಸರಿಯಲ್ಲ. ಅದು ದೇವರಿಗೆ ಮಾಡುವಂತಹ ಅಪಮಾನ. ಸಲಾಂ ಹೆಸರನ್ನು ಎಷ್ಟು ಬೇಗ ತೆಗೆದು ಹಾಕುತ್ತಾರೋ ಅಷ್ಟು ಶ್ರೇಯಸ್ಸು. ಇಲ್ಲದಿದ್ದರೆ ದೇವರ ಶಕ್ತಿ ಕಡಿಮೆಯಾಗುತ್ತದೆ ಎಂದು ತಿಳಿಸಿದ್ದಾರೆ.
ಶೀಘ್ರವಾಗಿ ಸಲಾಂ ತೆಗೆದು, ದೇವರ ಹೆಸರಿನಲ್ಲಿ ಪೂಜೆ ಮಾಡಲಿ. ಸಲಾಂ ಇನ್ನೂ ಸ್ವಲ್ಪ ವರ್ಷ ಕಳೆದರೆ, ಅಲ್ಲಾಹು ಸಲಾಂ ಎಂದು ಬರುವ ಸಾಧ್ಯತೆ ಇದೆ. ಅವರಲ್ಲಿ ಬೇಕಾದರೆ ಮಾಡಲಿ, ನಮ್ಮಲ್ಲಿ ಬೇಡ. ನಮ್ಮ ದೇವಸ್ಥಾನದಲ್ಲಿ ನಮ್ಮ ನಮ್ಮತನ ಇರಬೇಕು. ಹಿಂದೂ ದೇವರಿಗೆ ಇಂತಹ ಸಲಾಂ ಪೂಜೆ ನಡೆಯಬಾರದು ಎಂದು ಕಿಡಿ ಕಾರಿದ್ದಾರೆ.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…