Featured

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ವಿಶ್ವಕಪ್ ತಂಡದಿಂದ ನಿರ್ಗಮನ -Vishwanews24

ನವದೆಹಲಿ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದು ಅವರು ಚೇತರಿಸಿಕೊಳ್ಳದ ಕಾರಣ ಇದೀಗ ವಿಶ್ವಕಪ್ ಟೂರ್ನಿಯಿಂದಲೇ ಹೊರ ಬಿದ್ದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ವೇಳೆ ಶಿಖರ್ ಧವನ್ ಅವರ ಹೆಬ್ಬೆರಳಿಗೆ ಗಾಯವಾಗಿತ್ತು. ಆದರೆ ಅವರನ್ನು ಸ್ವದೇಶಕ್ಕೆ ಕಳಿಸದೇ ಲಂಡನ್ ನಲ್ಲೇ ಉಳಿಸಿಕೊಂಡು ಬಿಸಿಸಿಐ ವೈದ್ಯಕೀಯ ತಂಡವು ಒಂದು ವಾರದ ನಿಗಾ ವಹಿಸಲು ನಿರ್ಧರಿಸಿತ್ತು.

ಆದರೆ ಶಿಖರ್ ಧವನ್ ಗುಣಮುಖರಾಗಲು ಕನಿಷ್ಠ ಇನ್ನು ಮೂರು ವಾರ ಬೇಕಿದೆ ಎಂಬ ವರದಿಗಳು ಬಂದಿದ್ದವು. ಸದ್ಯ ನಿಗದಿತ ಅವಧಿಯೊಳಗೆ ಧವನ್ ಚೇತರಿಕೆ ಅಸಾಧ್ಯ ಎಂಬುದು ಕಂಡು ಬಂದ ಹಿನ್ನಲೆಯಲ್ಲಿ ವಿಶ್ವಕಪ್ ತಂಡದಿಂದ ನಿರ್ಗಮಿಸಬೇಕಾಗಿದೆ.

‘2019ರ ವಿಶ್ವಕಪ್‌ ತಂಡದ ಭಾಗವಾಗಿರುವುದಿಲ್ಲ ಎಂದು ಹೇಳಲು ಬೇಸರವಾಗುತ್ತಿದೆ. ದೌರ್ಭಾಗ್ಯವಶಾತ್, ನನ್ನ ಹೆಬ್ಬೆರಳ ಗಾಯ ನಿಗದಿತ ಸಮಯದಲ್ಲಿ ಗುಣವಾಗಿಲ್ಲ. ನಿಜವಾಗಿಯೂ ನನ್ನ ದೇಶಕ್ಕಾಗಿ ವಿಶ್ವಕಪ್ ಟೂರ್ನಿಯಲ್ಲಿ ಆಡಬೇಕು ಎಂಬ ಬಯಕೆ ನನ್ನದಾಗಿತ್ತು. ಇದೀಗ ತಂಡದಿಂದ ಹೊರಗುಳಿದು ಗುಣಮುಖನಾಗುವುದರತ್ತ ಮತ್ತು ಮುಂದಿನ ಟೂರ್ನಿಗಳತ್ತ ಗಮನಹರಿಸಬೇಕಿದೆ. ಭಾರತ ತಂಡದ ಎಲ್ಲ ಆಟಗಾರರು ಚೆನ್ನಾಗಿ ಆಡುತ್ತಿದ್ದಾರೆ. ಅವರು ವಿಶ್ವಕಪ್ ಗೆಲ್ಲಲಿದ್ದಾರೆ. ನಮಗಾಗಿ ಪ್ರಾರ್ಥಿಸುತ್ತಿರಿ, ನಮ್ಮನ್ನು ಬೆಂಬಲಿಸುತ್ತಿರಿ. ಸಹ ಆಟಗಾರರು ನೀಡಿದ ಬೆಂಬಲ ಮತ್ತು ಪ್ರೀತಿಗೆ ಋಣಿ. ಹಾಗೆಯೇ ನಿಮ್ಮ ಸಪೋರ್ಟ್‌ ಮತ್ತು ಪ್ರಾರ್ಥನೆ ನಮಗೆ ತುಂಬಾ ಮುಖ್ಯವಾದದ್ದು. ಅದಕ್ಕಾಗಿ ಧನ್ಯವಾದಗಳು. ಜೈ ಹಿಂದ್!’ ಎಂದು ಧವನ್ ಟ್ವೀಟ್ ಮಾಡಿದ್ದಾರೆ. ಜತೆಗೆ, ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿರುವ ವಿಡಿಯೊವನ್ನೂ ಪೋಸ್ಟ್ ಮಾಡಿದ್ದಾರೆ.

ಶಿಖರ್ ಧವನ್ ಬದಲಿಗೆ ರಿಷಬ್ ಪಂತ್ ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದ ಧವನ್ ಬದಲಿಗೆ ಕೆಎಲ್ ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

9 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

10 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

11 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

11 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

11 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago