ಟೀಕಿಸುತ್ತಾರೆ ಎಂಬ ಕಾರಣಕ್ಕೆ ಒಳ್ಳೆಯ ಕೆಲಸದಿಂದ ವಿಮುಖರಾಗಬಾರದು : ಪಟ್ಲ ಸತೀಶ ಶೆಟ್ಟಿ -Vishwanews24

ಮಂಗಳೂರು: ಸತ್ಕಾರ್ಯ ಮಾಡಿದಾಗ ಟೀಕೆ ಇದ್ದೇ ಇರುತ್ತದೆ. ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ಎಂದು ಮೇರು ಭಾಗವತ ಪಟ್ಲ ಸತೀಶ ಶೆಟ್ಟಿ ಹೇಳಿದರು.

ಕದ್ರಿ ರಾಜಾಂಗಣದಲ್ಲಿ ನಡೆದ ಬಾಲ ಯಕ್ಷಕೂಟ ಏಕಾದಶ ಸಂಭ್ರಮದಲ್ಲಿ ಕದ್ರಿ ಯಕ್ಷ ಸಮ್ಮಾನ” ಪ್ರಶಸ್ತಿಯನ್ನು ಹಿರಿಯ ಕಲಾವಿದ, ವೈದ್ಯ ಡಾ. ಭಾಸ್ಕರಾನಂದ ಕುಮಾರ್ ಅವರಿಗೆ ಪ್ರದಾನ ಮಾಡಿ ಮಾತನಾಡಿದರು. ಯಾವುದೇ ಸತ್ಕಾರ್ಯ ಮಾಡದೆ ಉಳಿದರೆ ಯಾರೂ ಟೀಕೆ ಮಾಡುವುದಿಲ್ಲ. ಆದ್ದರಿಂದ ಟೀಕಿಸುತ್ತಾರೆ ಎಂಬ ಕಾರಣಕ್ಕೆ ಒಳ್ಳೆಯ ಕೆಲಸದಿಂದ ವಿಮುಖರಾಗಬಾರದು ಎಂದು ಹೇಳಿದರು.

ಯಾವುದೇ ಫಲಾಪೇಕ್ಷೆ ಇಲ್ಲದೆ ಯುವಜನತೆಗೆ ಯಕ್ಷಗಾನ ಕಲಿಸುವ ಮೂಲಕ ಬಾಲ ಯಕ್ಷಕೂಟ ಮಾದರಿಯಾಗಿದೆ ಎಂದರು.

ತುಳು ಅಕಾಡೆಮಿ ಸದಸ್ಯ ಕದ್ರಿ ನವನೀತ ಶೆಟ್ಟಿ, ಪದಾಧಿಕಾರಿಗಳಾದ ದಿನೇಶ್ ದೇವಾಡಿಗ ಕದ್ರಿ, ವನಿತಾ ರಾಮಚಂದ್ರ ಎಲ್ಲೂರು, ಆರ್.ಕೆ. ರಾವ್, ಕುಂಜತ್ತೋಡಿ ವಾಸುದೇವ ಭಟ್, ಕೃಷ್ಣರಾಜ ನಂದಳಿಕೆ ಉಪಸ್ಥಿತರಿದ್ದರು. ಸಂಚಾಲಕ ಕದ್ರಿ ರಾಮಚಂದ್ರ ಭಟ್ ಎಲ್ಲೂರು ಸ್ವಾಗತಿಸಿದರು. ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು. ಅಧ್ಯಕ್ಷ ಕೆ.ಕೃಷ್ಣ ಭಟ್ ವಂದಿಸಿದರು. ರಿಶಿಕಾ ಕುಂದೇಶ್ವರ ಪ್ರಾರ್ಥಿಸಿದರು.

ಇದೇ ವೇಳೆ ಪ್ರಸಿದ್ಧ ಹಾಸ್ಯ ಕಲಾವಿದ ದಿನೇಶ್ ಕೋಡಪದವು ಅವರ ನೇತೃತ್ವದಲ್ಲಿ ಹಾಸ್ಯ ಸಿಂಚನ‌ ನಡೆಯಿತು. ಭಾಗವತ ದಯಾನಂದ ಕೋಡಿಕಲ್ ಸಾರಥ್ಯದಲ್ಲಿ ಮಹಿಳಾ ಯಕ್ಷಕೂಟದಿಂದ ಮೇದಿನಿ ನಿರ್ಮಾಣ, ಮಹಿಷ ವಧೆ ಯಕ್ಷಗಾನ ನಡೆಯಿತು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

11 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

12 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

12 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago