ಮುಂಬೈ: ಟೀಮ್ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ ಎಂದು ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಕಪಿಲ್ ದೇವ್ ಹೇಳಿದ್ದಾರೆ.
ಕೋಚ್ ಆಯ್ಕೆ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಇದು ಕಠಿಣವಲ್ಲ. ನಿಮ್ಮ ಕೆಲಸವನ್ನು ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ನೀವು ಮಾಡುತ್ತೀರಿ. ನಿಮ್ಮ ಜವಾಬ್ದಾರಿಗಳನ್ನು ನೀವು ಪೂರೈಸದಿದ್ದಾಗ ಮಾತ್ರ ಅದು ಕಠಿಣವಾಗುತ್ತದೆ’ ಎಂದು ಹೇಳಿದ್ದಾರೆ.
ರವಿಶಾಸ್ತ್ರಿ ಅವರು ಮುಂದಿನ ಕೋಚ್ ಆಗಿ ಮುಂದುವರಿಯಲಿ ಎನ್ನುವುದು ನಾಯಕ ವಿರಾಟ್ ಅಭಿಪ್ರಾಯವದು. ಅದು ನನ್ನದಲ್ಲ. ಎಲ್ಲರಿಗೂ ಅವರದೇ ಆದ ಅಭಿಪ್ರಾಯ ವ್ಯಕ್ತಪಡಿಸಲು ಸ್ವತಂತ್ರವಿದೆ. ಹಾಗಾಗಿ, ಇದರ ಬಗ್ಗೆ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂದು ಹೇಳಿದರು.
ಇನ್ನು ಭಾರತ ತಂಡದ ಮುಖ್ಯ ತರಬೇತದಾರ ನೇಮಕ ಮಾಡುವ ಪ್ರಯತ್ನದಲ್ಲಿರುವ ಕಪಿಲ್ ದೇವ್, ಅಂಶುಮಾನ್ ಗಾಯಕ್ವಾಡ್ ಮತ್ತು ಶಾಂತ ರಂಗಸ್ವಾಮಿ ಅವರನ್ನೊಳಗೊಂಡ ಕೋಚ್ ಹುದ್ದೆಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲನೆಯಲ್ಲಿ ತಲ್ಲೀನರಾಗಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…