Featured

ಟೂಲ್‌ ಕಿಟ್‌ ಪ್ರಕರಣ : ನಿಖಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ -Vishwanews24

ಟೂಲ್‌ ಕಿಟ್‌ ಪ್ರಕರಣ : ನಿಖಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ -Vishwanews24

ನವದೆಹಲಿ: ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ‘ಟೂಲ್‌ ಕಿಟ್‌‘ ಹಂಚಿದ ಪ್ರಕರಣದ ಸಹ ಆರೋಪಿ ನಿಕಿತಾ ಜೇಕಬ್‌‌ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡಲು ದೆಹಲಿಯ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಪೊಲೀಸರಿಗೆ ಒಂದು ವಾರ ಕಾಲಾವಕಾಶ ನೀಡಿದೆ.

ಬಾರ್ಕೂರು: ಆರ್‌ಟಿಐ ಕಾರ್ಯಕರ್ತ ಹಲ್ಲೆ ಪ್ರಕರಣ : ಆರೋಪಗಳನ್ನು ಬಂಧಿಸದಿದ್ದರೆ ತೀವ್ರ ಪ್ರತಿಭಟನೆ : ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ -Vishwanews24

ನಿಕಿತಾ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸುವ ವೇಳೆ, ‘ಜೇಕಬ್‌‌ ಅವರು ಸಲ್ಲಿಸಿರುವ ಮನವಿಗೆ ವಿವರವಾದ ಉತ್ತರ ನೀಡಲು ತನಿಖಾ ಸಂಸ್ಥೆಗೆ ಸಮಯ ಬೇಕಾಗುತ್ತದೆ‘ ಎಂದು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಮಾರ್ಚ್ 9ರವರೆಗೆ ಕಾಲಾವಕಾಶ ನೀಡಿ ಆದೇಶಿಸಿದರು. ಇದೇ ದಿನ, ಈ ಪ್ರಕರಣದ ಮತ್ತೊಬ್ಬ ಸಹ ಆರೋಪಿ ಶಾಂತನು ಮುಲುಕ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನೂ ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ.

ಸಂಸದ ಪ್ರತಾಪ್ ಸಿಂಹ ವಿರುದ್ದ ಶಿಲುಬೆಗಳನ್ನು ಹಿಡಿದು ಧರಣಿ ಸತ್ಯಾಗ್ರಹ ನಡೆಸಿದ ಕ್ರಿಶ್ಚಿಯನ್ ಪೊಲಿಟಿಕಲ್ ಲೀಡರ್ಸ್ ಫೋರಂನ ಕಾರ್ಯಕರ್ತರು -Vishwanews24

ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ನಡೆದ ವಿಚಾರಣೆ ವೇಳೆ, ಜೇಕಬ್‌ ಪರವಾಗಿ ಹಾಜರಾದ ಹಿರಿಯ ವಕೀಲೆ ರೆಬೆಕಾ ಜಾನ್, ‘ನಾನು ಇಲ್ಲಿ ಜೇಕಬ್‌ ಪರ ವಾದ ಮಾಡುತ್ತಿದ್ದೇನೆಯೇ ಹೊರತು ಶಾಂತನು ಮುಲುಕ್‌ ಪರ ಅಲ್ಲ‘ ಎಂದು ಸ್ಪಷ್ಟಪಡಿಸಿದರು.

ನ್ಯಾಯಾಲಯ, ಮಾರ್ಚ್‌ 9ರಂದು ರೆಬೆಕಾ ಅವರು ತಮ್ಮ ವಾದ ಮಂಡಿಸಬಹುದು ಎಂದು ಹೇಳಿತು. ಹಾಗೆಯೇ, ಜೇಕಬ್‌ ನಿರೀಕ್ಷಣಾ ಜಾಮೀನು ಅರ್ಜಿ ಕುರಿತು ಪೊಲೀಸರು ನ್ಯಾಯಾಲಯಕ್ಕೆ ನೀಡುವ ಪ್ರತಿಕ್ರಿಯೆಯ ಒಂದು ಪ್ರತಿಯನ್ನು, ಅವರ ಪರ ವಕೀಲರಿಗೆ ನೀಡುವಂತೆ ನ್ಯಾಯಾಲಯ ನಿರ್ದೇಶನ ನೀಡಿತು.

ಪುತ್ತೂರು: ಮಹಿಳಾ ಎಸ್.ಐ ಮೇಲೆ ಹಲ್ಲೆ ಪ್ರಕರಣ ; ಇಬ್ಬರು ಸಹೋದರಿಯರ ಬಂಧನ -Vishwanews24

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

7 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

21 hours ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

1 day ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

1 day ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

1 day ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

1 day ago