Featured

ಟೆನ್ನಿಸ್ ಆಟಗಾರ್ತಿ ಕೊಲೆ ಪ್ರಕರಣ : ಆರೋಪಿ ತಂದೆಗೆ 14 ದಿನ ನ್ಯಾಯಾಂಗ ಬಂಧನ – vishwanews24

ಟೆನ್ನಿಸ್ ಆಟಗಾರ್ತಿ ಕೊಲೆ ಪ್ರಕರಣ : ಆರೋಪಿ ತಂದೆಗೆ 14 ದಿನ ನ್ಯಾಯಾಂಗ ಬಂಧನ

ಚಂಡೀಗಢ: ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆ ದೀಪಕ್ ಯಾದವ್‌ನನ್ನು ಗುರುಗ್ರಾಮ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.

ದೀಪಕ್‌ನನ್ನು ಬಂಧಿಸಿದ ಗುರುಗ್ರಾಮ ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ದೀಪಕ್ ಯಾದವ್‌ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ರಾಜ್ಯ ಮಟ್ಟದ ಟೆನ್ನಿಸ್ ಆಟಗಾರ್ತಿ ರಾಧಿಕಾಳನ್ನು (25) ಜುಲೈ 10 ರಂದು ಗುರುಗ್ರಾಮದಲ್ಲಿರುವ ಮನೆಯಲ್ಲಿ ತಂದೆ ದೀಪಕ್ ಯಾದವ್ ರಿವಾಲ್ವರ್‌ನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ.

ದೀಪಕ್ ಯಾದವ್ ಅವರ ಊರಾದ ವಜೀರಾಬಾದ್‌ಗೆ ತೆರಳಿದ್ದ ಸಂದರ್ಭ ಗ್ರಾಮಸ್ಥರು ಮತ್ತು ಗೆಳೆಯರು ಅವರನ್ನು ನಿಂದಿಸಿದ್ದರು. ಇದರಿಂದ ದೀಪಕ್ ಕೋಪಗೊಂಡಿದ್ದರು. ಅವರ ಗೆಳೆಯರು, ಸಂಬಬಂಧಿಕರು ದೀಪಕ್ ತಮ್ಮ ಮಗಳ ಟೆನಿಸ್ ಅಕಾಡೆಮಿಯಿಂದ ಪಡೆಯುವ ಆದಾಯದಿಂದ ಬದುಕುತ್ತಿದ್ದಕ್ಕಾಗಿ ಅಪಹಾಸ್ಯ ಮಾಡಿದ್ದರು. ಇದರಿಂದ ದೀಪಕ್ ಯಾದವ್ ಮಗಳ ಮೇಲೆ ಕೋಪಗೊಂಡಿದ್ದರು. ಮಗಳಿಗೆ ಟೆನಿಸ್ ಅಕಾಡೆಮಿ ಮುಚ್ಚುವಂತೆ ಅನೇಕ ಬಾರಿ ಹೇಳಿದ್ದರು. ಆದರೆ, ಅದಕ್ಕೆ ಆಕೆ ಒಪ್ಪಿರಲಿಲ್ಲ. ಇದೇ ವಿಚಾರಕ್ಕೆ ಜಗಳವಾಡಿ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಂದೆ ತನ್ನ ಮಗಳ ವೃತ್ತಿಜೀವನ ಮತ್ತು ಗಳಿಕೆಯ ಬಗ್ಗೆ ಸಾಮಾಜಿಕ ಟೀಕೆಗಳಿಂದಾಗಿ ಕಳೆದ 15 ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಗುರುವಾರ ಮಗನನ್ನು ಹಾಲು ತರಲೆಂದು ಮನೆಯಿಂದ ಹೊರಗೆ ಕಳುಹಿಸಿ ಅಡುಗೆ ಮಾಡುತ್ತಿದ್ದ ಮಗಳ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

15 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

16 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 hours ago