Featured

ಟೆನ್ನಿಸ್ ಜಗತ್ತಿಗೆ ನಿವೃತ್ತಿ ಘೋಷಿಸಿದ ಸಾನಿಯಾ ಮಿರ್ಜಾ – Vishwanews24

ಟೆನ್ನಿಸ್ ಜಗತ್ತಿಗೆ ನಿವೃತ್ತಿ ಘೋಷಿಸಿದ ಸಾನಿಯಾ ಮಿರ್ಜಾ

ದುಬೈ ಡ್ಯೂಟಿ ಫ್ರೀ ಟೆನಿಸ್ ಚಾಂಪಿಯನ್ ಶಿಪ್ ಪಂದ್ಯಾವಳಿಯ ನಂತರ ಟೆನಿಸ್ ಗೆ ವಿದಾಯ

ವದೆಹಲಿ: ದುಬೈ ಡ್ಯೂಟಿ ಫ್ರೀ ಟೆನಿಸ್ ಚಾಂಪಿಯನ್ ಶಿಪ್ ಪಂದ್ಯಾವಳಿಯ ನಂತರ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ವೃತ್ತಿಪರ ಟೆನಿಸ್ ಗೆ ವಿದಾಯ ಹೇಳಲಿದ್ದಾರೆ ಎನ್ನಲಾಗಿದೆ. ಅಂದ ಹಾಗೇ ದುಬೈ ಡ್ಯೂಟಿ ಚಾಂಪಿಯನ್ ಶಿಪ್ ಟೂರ್ನಮೆಂಟ್ ಮುಂದಿನ ತಿಂಗಳು ನಡೆಯಲಿದೆ.

ಈ ಹಿಂದೆ ಸಾನಿಯಾ ಮಿರ್ಜಾ ಕಳೆದ ವರ್ಷ ಯುಎಸ್ ಓಪನ್ ನಂತರ ವೃತ್ತಿಪರ ಟೆನಿಸ್ಗೆ ವಿದಾಯ ಹೇಳಲು ನಿರ್ಧರಿಸಿದರು, ಆದರೆ ಗಾಯದಿಂದಾಗಿ, ಅವರು ಪಂದ್ಯಾವಳಿಯಲ್ಲಿ ಆಡಲು ಸಾಧ್ಯವಾಗಲಿಲ್ಲ.

ಸಾನಿಯಾ ಮಿರ್ಜಾ ಕಳೆದ 10 ವರ್ಷಗಳಿಂದ ದುಬೈನಲ್ಲಿ ವಾಸಿಸುತ್ತಿದ್ದಾರೆ. ಸಾನಿಯಾ ಮಿರ್ಜಾ ದುಬೈನಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಮೂಲಕ ಸಾನಿಯಾ ಮಿರ್ಜಾ ತಮ್ಮ ಅಭಿಮಾನಿಗಳಲ್ಲಿ ಟೆನಿಸ್ ವೃತ್ತಿಜೀವನಕ್ಕೆ ವಿದಾಯ ಹೇಳಲಿದ್ದಾರೆ

36 ವರ್ಷ ವಯಸ್ಸಿನ ಸಾನಿಯಾ ಮಿರ್ಜಾ ಡಬಲ್ಸ್‌ನಲ್ಲಿ ವಿಶ್ವದ ನಂಬರ್-1 ಆಗಿದ್ದಾರೆ. 2022ರ ಅಂತ್ಯದಲ್ಲಿ ನಿವೃತ್ತಿ ಹೊಂದುವುದಾಗಿ ಸಾನಿಯಾ ಕಳೆದ ವರ್ಷವೇ ಘೋಷಿಸಿದ್ದರು. ಇದೀಗ ಸಾನಿಯಾ ಮಿರ್ಜಾ ಈ ವರ್ಷದ ಮೊದಲ ಗ್ರ್ಯಾನ್ ಸ್ಲಾಮ್ ಆಸ್ಟ್ರೇಲಿಯನ್ ಓಪನ್ ಆಡಲಿದ್ದಾರೆ. ಇದಾದ ಬಳಿಕ ಯುಎಇಯಲ್ಲಿ ಚಾಂಪಿಯನ್ ಶಿಪ್ ಆಡಿದ ಬಳಿಕ ಟೆನಿಸ್ ಗೆ ವಿದಾಯ ಹೇಳಲಿದ್ದಾರೆ.

Vishwa News 24

Recent Posts

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

30 minutes ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

34 minutes ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

42 minutes ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

48 minutes ago

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

4 days ago