ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸರ್ವಿಸ್ ರಸ್ತೆಯಲ್ಲಿ ಎಕ್ಸ್ ಪ್ರೆಸ್ ಬಸ್ ಚಾಲಕರ ರಂಪಾಟ ಮತ್ತೆ ಮುಂದುವರೆದಿದೆ.
ಸೋಮವಾರ (ಆ.10) ಬೆಳಗ್ಗೆ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಎರಡು ಎಕ್ಸ್ ಪ್ರೆಸ್ ಬಸ್ಗಳ ಚಾಲಕರು ಬಸ್ಗಳನ್ನು ರಸ್ತೆಯಲ್ಲಿ ನಿಲ್ಲಿಸಿ ಪರಸ್ಪರ ವಾಗ್ವಾದ ನಡೆಸಿ ಸ್ಥಳೀಯರಲ್ಲಿ ಆತಂಕದ ವಾತಾವರಣ ಮೂಡಿಸಿದ್ದಾರೆ.
ಟೈಮಿಂಗ್ ವಿಚಾರದಲ್ಲಿ ಬಸ್ ಚಾಲಕರು ಮತ್ತು ನಿರ್ವಾಹಕರು ಬಸ್ನೊಳಗೆ ಜಗಳ ಮಾಡಿದ್ದು, ಬಳಿಕ ಬಸ್ನಿಂದ ಕೆಳಗಿಳಿದು ಪ್ರಯಾಣಿಕರ ಎದುರಲ್ಲೇ ವಾಗ್ವಾದ ಮುಂದುವರಿಸಿದ್ದಾರೆ.
ಸ್ಥಳೀಯರು ಮತ್ತು ರಿಕ್ಷಾ ಚಾಲಕರು ಅವರನ್ನು ಸಮಾಧಾನಗೊಳಿಸಲು ಪ್ರಯತ್ನಿಸಿದರಾದರು ಸುಮಾರು 10 ನಿಮಿಷಗಳ ಕಾಲ ತಮ್ಮ ವಾಗ್ವಾದವನ್ನು ಮುಂದುವರಿಸಿದ್ದಾರೆ.
ಕಾಪು ಸರ್ವಿಸ್ ಬಸ್ ನಿಲ್ದಾಣದಲ್ಲಿ ಎಕ್ಸ್ಪ್ರೆಸ್ ಚಾಲಕರ ಈ ರೀತಿ ವರ್ತನೆ ನಿರಂತರವಾಗಿ ನಡೆಯುತ್ತಿದ್ದು, ಎರಡು ವಾರದ ಹಿಂದೆ ಇಂತಹ ಘಟನೆ ನಡೆದಾಗ ಪೊಲೀಸರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದರು.
ಇದೀಗ ಮತ್ತೆ ಎರಡು ಬಸ್ ಚಾಲಕರು ಇದೇ ರೀತಿಯ ವರ್ತನೆಯನ್ನು ಮುಂದುವರಿಸಿದ್ದು ಅವರ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸ್ಥಳೀಯರು ಮತ್ತು ಬಸ್ ಪ್ರಯಾಣಿಕರು ಆಗ್ರಹಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…
ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ ಉಡುಪಿ: ಭಕ್ತರು, ದಾನಿಗಳು ಹಾಗೂ ಸಮಾಜದ ಸರ್ವರ ಸಹಕಾರದೊಂದಿಗೆ ಪಂಚಮ ವರ್ಷದ…