ಉಡುಪಿ : ಟೈಲರ್ ಕ್ಷೇಮ ನಿಧಿ ಮಂಡಳಿ ರಚಿಸಿ ಆ ಮೂಲಕ ಭವಿಷ್ಯನಿಧಿ ಮತ್ತು ಮಾಸಿಕ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವತಿಯಿಂದ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಬಗ್ಗೆ ಮುಖ್ಯಮಂತ್ರಿವರಿಗೆ ಸಲ್ಲಿಸಿದ ಮನವಿಯಲ್ಲಿ, ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಎಂಬ ರಾಜ್ಯಮಟ್ಟದ ಸಂಘಟನೆಯನ್ನು 23 ವರ್ಷಗಳ ಹಿಂದೆ ಸ್ಥಾಪಿಸಲಾಗಿದೆ. ರಾಜ್ಯಾದ್ಯಂತ ಹೊಲಿಗೆ ಕೆಲಸದಿಂದ ಜೀವನ ಸಾಗಿಸುತ್ತಿರುವ ಸುಮಾರು 10 ಲಕ್ಷಕ್ಕೂ ಹೆಚ್ಚು ಸ್ತ್ರೀ-ಪುರುಷ ಹೊಲಿಗೆ ಕೆಲಸಗಾರರಿಗೆ ಜೀವನ ಭದ್ರತೆಯನ್ನು ಒದಗಿಸಲು ಟೈಲರ್ಸ್ ಕ್ಷೇಮ ನಿಧಿ ಮಂಡಳಿಯನ್ನು ರಚಿಸುವಂತೆ ಕಳೆದ 22 ವರ್ಷಗಳಿಂದ ಮನವಿ ಹಾಗೂ ಶಾಂತ ರೀತಿಯ ಚಳುವಳಿಗಳ ಮುಖೇನ ರಾಜ್ಯ ಸರಕಾರವನ್ನು ಒತ್ತಾಯಿಸುತ್ತಾ ಬಂದಿರುತ್ತೇವೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರವು ಟೈಲರ್ ಕ್ಷೇಮನಿಧಿ ಮಂಡಳಿ, ರಚಿಸುವ ಮೂಲಕ ಅಗತ್ಯ ಬೇಡಿಕೆಗಳಾದ ಭವಿಷ್ಯ ನಿಧಿ ಹಾಗೂ ಪಿಂಚಣಿ ಯೋಜನೆ ಜಾರಿ ಗೊಳಿಸಬೇಕು, ಹೊಲಿಗೆ ಕೆಲಸಗಾರರ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ ನೀಡುವುದು, ಹೊಲಿಗೆ ಕೆಲಸಗಾರರಿಗೆ ವಾಸಕ್ಕಾಗಿ ಮನೆ ನಿರ್ಮಾಣ ಅಥವಾ ದುರಸ್ತಿ ಮಾಡಲು ಹಾಗೂ ಹೊಲಿಗೆಯಂತ್ರ ಖರೀದಿಸಲು ಶೇಕಡ 4 ರಷ್ಟು ಬಡ್ಡಿಯಲ್ಲಿ ಸಾಲ ಸೌಲಭ್ಯ ನೀಡುವುದು. ಮತ್ತು ಹೊಲಿಗೆ ಕೆಲಸಗಾರರಿಗೆ ಆರೋಗ್ಯ ವಿಮೆಯನ್ನು ಜಾರಿಗೊಳಿಸಬೇಕು ಎಂಬ ಬೇಡಿಕೆಗಳನ್ನು ಪರಿಶೀಲಿಸಿ ಮಸೂದೆಯಲ್ಲಿ ಸೂಕ್ತ ನಿರ್ಣಯವನ್ನು ರಚಿಸುವ ಮೂಲಕ ಕೂಡಲೇ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರವನ್ನು ಒತ್ತಾಯಿಸಲಾಗಿದೆ.
ಕಾಪುವಿನಲ್ಲಿ ಜನಸಂಕಲ್ಪ ಯಾತ್ರೆ ಉದ್ಘಾಟಿಸಿದ ಮುಖ್ಯಮಂತ್ರಿ ಬೊಮ್ಮಾಯಿ – ಯಡಿಯೂರಪ್ಪ : Vishwanews24
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…