Featured

ಟೋಕಿಯೊ ಒಲಿಂಪಿಕ್ಸ್‌ : ಭಾರತಕ್ಕೆ ಪ್ರಥಮ ಪದಕ , ಬೆಳ್ಳಿ ಪದಕ ಗೆದ್ದು ಬೀಗಿದ್ ವೇಟ್‌ಲಿಫ್ಟರ್ ಮೀರಾಬಾಯಿ -Vishwanews24

ಟೋಕಿಯೊ ಒಲಿಂಪಿಕ್ಸ್‌ : ಭಾರತಕ್ಕೆ ಪ್ರಥಮ ಪದಕ , ಬೆಳ್ಳಿ ಪದಕ ಗೆದ್ದು ಬೀಗಿದ್ ವೇಟ್‌ಲಿಫ್ಟರ್ ಮೀರಾಬಾಯಿ -Vishwanews24

ಟೋಕಿಯೊ : ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 49 ಕೆಜಿ ವಿಭಾಗದಲ್ಲಿ ಭಾರತದ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ಬೀಗಿದ್ದಾರೆ.

ಸ್ಪರ್ಧೆಯಲ್ಲಿ ಮೀರಾಬಾಯಿ ಚಾನು ತನ್ನ ಅಂತಿಮ ಪ್ರಯತ್ನದಲ್ಲಿ 117 ಕೆ.ಜಿ.ಗೆ ಭಾರ ಎತ್ತಿಲು ಪ್ರಯತ್ನಿಸಿ ವಿಫಲವಾಗಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

2014 ರಿಂದ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ನಿಯಮಿತ ಉಪಸ್ಥಿತಿಯಲ್ಲಿರುವ ಚಾನು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ವಿಶ್ವ ಚಾಂಪಿಯನ್‌ಶಿಪ್ ಮತ್ತು ಬಹು ಪದಕಗಳನ್ನು ಗೆದ್ದಿದ್ದಾರೆ. ಏಪ್ರಿಲ್‌ನಲ್ಲಿ ತಾಷ್ಕೆಂಟ್‌ನಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಚಾನು ಕ್ಲೀನ್ ಮತ್ತು ಜರ್ಕ್‌ನಲ್ಲಿ ವಿಶ್ವ ದಾಖಲೆ ಬರೆದು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದರು.

2018ರಲ್ಲಿ ಬೆನ್ನು ನೋವಿಗೆ ತುತ್ತಾಗಿರುವ ಮೀರಾ ಬಾಯಿ, ಒಂಬತ್ತು ತಿಂಗಳುಗಳಿಂದ ಕ್ರೀಡೆಯಿಂದ ದೂರವುಳಿದಿದ್ದರು. ಇದರಿಂದಾಗಿ ಮತ್ತೆ ಸ್ಪರ್ಧಾ ಜಗತ್ತಿಗೆ ಮರಳುವರೇ ಎಂಬ ಸಂದೇಹ ಮೂಡಿತ್ತು. ಆದರೆ ಆ ಬಳಿಕ ಕ್ರೀಡಾ ಜಗತ್ತಿಗೆ ಪುನರಾಗಮನವನ್ನು ಸಾರಿದ್ದರು.

ಒಲಿಂಪಿಕ್ಸ್​​​ ವೇಯ್ಟ್​​ ಲಿಫ್ಟಿಂಗ್​ ವಿಭಾಗದಲ್ಲಿ ಭಾರತಕ್ಕೆ ಇದು 2ನೇ ಪದಕವಾಗಿದೆ. ಕರ್ಣಂ ಮಲ್ಲೇಶ್ವರಿ ಬಳಿಕ ವೇಯ್ಟ್​​ ಲಿಫ್ಟಿಂಗ್​ನಲ್ಲಿ ಪದಕ ಪಡೆದ 2ನೇ ಮಹಿಳಾ ಎಂಬ ಹೆಗ್ಗಳಿಕೆಗೆ ಮೀರಾಬಾಯಿ ಚಾನು ಪಾತ್ರರಾಗಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

15 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

15 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

16 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

16 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

16 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

16 hours ago