ಹೊಸದಿಲ್ಲಿ: ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆಯುವಲ್ಲಿ ಭಾರತೀಯ ಈಜುಗಾರರು ಈ ಬಾರಿ ಭಾರೀ ಸುದ್ದಿ ಮಾಡುತ್ತಿದ್ದಾರೆ. ಸಾಜನ್ ಪ್ರಕಾಶ್, ಶ್ರೀಹರಿ ನಟರಾಜ್ ಬಳಿಕ ಮೂರನೇ ಭಾರತೀಯ ಈಜುಪಟುವಾಗಿ ಮಾನಾ ಪಟೇಲ್ ಆಯ್ಕೆಯಾಗಿದ್ದಾರೆ.
ಮಾನಾ ಪಟೇಲ್ ಯುನಿವರ್ಸಾಲಿಟಿ ಕೋಟಾದಡಿಯಲ್ಲಿ ಸ್ಥಾನ ಸಂಪಾದಿಸಿದ್ದಾರೆ. ಟೋಕಿಯೋ ಒಲಿಂಪಿಕ್ಸ್ ಗೆ ಸ್ಥಾನ ಪಡೆದ ಭಾರತದ ಮೊದಲ ಮಹಿಳಾ ಈಜುಪಟು ಎಂಬ ಸಾಧನೆ ಮಾಡಿದ್ದಾರೆ.
ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರುಈ ಕುರಿತಾಗಿ ಟ್ವಿಟ್ ಮಾಡಿದ್ದು, ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಮೊದಲ ಮಹಿಳಾ ಮತ್ತು 3ನೇ ಭಾರತೀಯ ಈಜುಗಾರ್ತಿ ಮಾನಾ ಪಟೇಲ್ಗೆ ಶುಭಾಶಯ ಎಂದು ಹೇಳಿದ್ದಾರೆ.
ಒಲಿಂಪಿಕ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತದ ಮೂವರು ಈಜುಪಟುಗಳು ಟೋಕಿಯೋ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸುತ್ತಿದ್ದಾರೆ. 200 ಮೀಟರ್ ಬಟರ್ಪ್ಲೈ ವಿಭಾಗದಲ್ಲಿ ಸಾಜನ್ ಪ್ರಕಾಶ್ ನೇರ ಅರ್ಹತೆ ಪಡೆಯುವ ಮೂಲಕ ಸಾಧನೆ ಮಾಡಿದ್ದರು. ನಂತರ ಶ್ರೀಹರಿ ನಟರಾಜ್ ಅವರೂ ಅರ್ಹತೆ ಸಾಧಿಸಿದ್ದರು. ಇದೀಗ ಮಾನಾ ಪಟೇಲ್ ಅವರೂ ಕೂಡ : ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ಅವಕಾಶ ಪಡೆದುಕೊಂಡಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…