ಬೆಂಗಳೂರು/ರಾಮನಗರ: ಪ್ರೀತಿ-ಪ್ರೇಮದ ಹೆಸರಿನಲ್ಲಿ ಟ್ಯೂಷನ್ ಟೀಚರ್ನಿಂದಲೇ 10ನೇ ತರಗತಿ ವಿದ್ಯಾರ್ಥಿನಿ ಕಿಡ್ನ್ಯಾಪ್ ಆಗಿರುವ ಘಟನೆ ನಡೆದಿದೆ.
ಕನಕಪುರ ಮೂಲದ ಬಾಲಕಿ ತಂದೆಯಿಂದ ಜೆ.ಪಿ.ನಗರ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಕನಕಪುರ ಮೂಲದ ಟ್ಯೂಷನ್ ಟೀಚರ್ ಅಭಿಷೇಕ್ನಿಂದ ವಿದ್ಯಾರ್ಥಿನಿ ಅಪಹರಣವಾಗಿದೆ.
ಕಳೆದ ನ.23 ರಂದು ಎಂದಿನಂತೆ ಆರೋಪಿ ಬಳಿ ಟ್ಯೂಷನ್ಗೆ ವಿದ್ಯಾರ್ಥಿನಿ ಬಂದಿದ್ದಳು. ಟ್ಯೂಷನ್ ಮುಗಿದು ರಾತ್ರಿಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ರಾತ್ರಿ ಟ್ಯೂಷನ್ ಸೆಂಟರ್ ಬಳಿ ಹೋದಾಗ ಬಾಲಕಿಯನ್ನ ಟ್ಯೂಷನ್ ಟೀಚರ್ ಕರೆದೊಯ್ದಿರೋದು ಗೊತ್ತಾಗಿದೆ.
ಬಾಲಕಿಯನ್ನ ಕರೆದೊಯ್ಯುವ ವೇಳೆ ಮನೆಯ ರೂಂನಲ್ಲೇ ಮೊಬೈಲ್ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಕಳೆದ ನಲವತ್ತು ದಿನಗಳಿಂದ ಸಣ್ಣ ಸುಳಿವು ಸಿಗದಂತೆ ಅಪ್ರಾಪ್ತೆ ಜೊತೆ ತಲೆಮರೆಸಿಕೊಂಡಿದ್ದಾನೆ.
ಪೋನ್ ಬಳಕೆ ಮಾಡ್ತಿಲ್ಲ. ಪೋನ್ ಪೇ, ಗೂಗಲ್ ಪೇ, ಎಟಿಎಂ ಸೇರಿ ಆನ್ಲೈನ್ ಪೇಮೆಂಟ್ ಕೂಡ ಆರೋಪಿ ಮಾಡುತ್ತಿಲ್ಲ. ಕಳೆದ ನಲವತ್ತು ದಿನಗಳಿಂದ ಬೆಂಗಳೂರು ರಾಮನಗರ, ಕನಕಪುರ ಸೇರಿ ಹಲವು ಕಡೆ ಆರೋಪಿಗಾಗಿ ಪೊಲೀಸರು ತಲಾಶ್ ನಡೆಸಿದ್ದಾರೆ.
ಸದ್ಯ ಆರೋಪಿ ಸುಳಿವು ಕೊಟ್ಟವರಿಗೆ ಬಹುಮಾನ ನೀಡುವುದಾಗಿ ಪೊಲೀಸ್ ಪ್ರಕಟಣೆಯಲ್ಲಿ ಘೋಷಿಸಲಾಗಿದೆ. ಆರೋಪಿ ಪತ್ತೆಯಾಗದ ಹಿನ್ನೆಲೆ ಪೊಲೀಸರು ಲುಕ್ಔಟ್ ನೋಟಿಸ್ ಹೊರಡಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…