ಬೆಂಗಳೂರು/ರಾಮನಗರ: ಪ್ರೀತಿ-ಪ್ರೇಮದ ಹೆಸರಿನಲ್ಲಿ ಟ್ಯೂಷನ್ ಟೀಚರ್ನಿಂದಲೇ 10ನೇ ತರಗತಿ ವಿದ್ಯಾರ್ಥಿನಿ ಕಿಡ್ನ್ಯಾಪ್ ಆಗಿರುವ ಘಟನೆ ನಡೆದಿದೆ.
ಕನಕಪುರ ಮೂಲದ ಬಾಲಕಿ ತಂದೆಯಿಂದ ಜೆ.ಪಿ.ನಗರ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಕನಕಪುರ ಮೂಲದ ಟ್ಯೂಷನ್ ಟೀಚರ್ ಅಭಿಷೇಕ್ನಿಂದ ವಿದ್ಯಾರ್ಥಿನಿ ಅಪಹರಣವಾಗಿದೆ.
ಕಳೆದ ನ.23 ರಂದು ಎಂದಿನಂತೆ ಆರೋಪಿ ಬಳಿ ಟ್ಯೂಷನ್ಗೆ ವಿದ್ಯಾರ್ಥಿನಿ ಬಂದಿದ್ದಳು. ಟ್ಯೂಷನ್ ಮುಗಿದು ರಾತ್ರಿಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ರಾತ್ರಿ ಟ್ಯೂಷನ್ ಸೆಂಟರ್ ಬಳಿ ಹೋದಾಗ ಬಾಲಕಿಯನ್ನ ಟ್ಯೂಷನ್ ಟೀಚರ್ ಕರೆದೊಯ್ದಿರೋದು ಗೊತ್ತಾಗಿದೆ.
ಬಾಲಕಿಯನ್ನ ಕರೆದೊಯ್ಯುವ ವೇಳೆ ಮನೆಯ ರೂಂನಲ್ಲೇ ಮೊಬೈಲ್ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಕಳೆದ ನಲವತ್ತು ದಿನಗಳಿಂದ ಸಣ್ಣ ಸುಳಿವು ಸಿಗದಂತೆ ಅಪ್ರಾಪ್ತೆ ಜೊತೆ ತಲೆಮರೆಸಿಕೊಂಡಿದ್ದಾನೆ.
ಪೋನ್ ಬಳಕೆ ಮಾಡ್ತಿಲ್ಲ. ಪೋನ್ ಪೇ, ಗೂಗಲ್ ಪೇ, ಎಟಿಎಂ ಸೇರಿ ಆನ್ಲೈನ್ ಪೇಮೆಂಟ್ ಕೂಡ ಆರೋಪಿ ಮಾಡುತ್ತಿಲ್ಲ. ಕಳೆದ ನಲವತ್ತು ದಿನಗಳಿಂದ ಬೆಂಗಳೂರು ರಾಮನಗರ, ಕನಕಪುರ ಸೇರಿ ಹಲವು ಕಡೆ ಆರೋಪಿಗಾಗಿ ಪೊಲೀಸರು ತಲಾಶ್ ನಡೆಸಿದ್ದಾರೆ.
ಸದ್ಯ ಆರೋಪಿ ಸುಳಿವು ಕೊಟ್ಟವರಿಗೆ ಬಹುಮಾನ ನೀಡುವುದಾಗಿ ಪೊಲೀಸ್ ಪ್ರಕಟಣೆಯಲ್ಲಿ ಘೋಷಿಸಲಾಗಿದೆ. ಆರೋಪಿ ಪತ್ತೆಯಾಗದ ಹಿನ್ನೆಲೆ ಪೊಲೀಸರು ಲುಕ್ಔಟ್ ನೋಟಿಸ್ ಹೊರಡಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…