ಮಂಡ್ಯ: ನಗರದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮೂರೂವರೆ ವರ್ಷದ ಮಗು ಪ್ರಾಣ ಕಳೆದುಕೊಂಡ ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ನಿವಾಸಿಗಳಾದ ಅಶೋಕ್, ವಾಣಿ ದಂಪತಿಯ ಪುತ್ರಿ ಹೃತೀಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹೃತೀಕ್ಷಾಗೆ ನಾಯಿ ಕಚ್ಚಿದ್ದರಿಂದ ತಂದೆ, ತಾಯಿ ಬೈಕ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಹೆಲ್ಮೆಟ್ ತಪಾಸಣೆಗಾಗಿ ಸ್ವರ್ಣಸಂದ್ರ ಬಳಿ ಸಂಚಾರಿ ಠಾಣೆ ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಹೀಗಾಗಿ ಮಗು ಸೇರಿದಂತೆ ದಂಪತಿ ಆಯಾ ತಪ್ಪಿ ಬಿದಿದ್ದಾರೆ. ಈ ವೇಳೆ ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದೆ.
ಮಗುವನ್ನು ಮಡಿನಲ್ಲಿ ಇಟ್ಟುಕೊಂಡು ರಸ್ತೆಯಲ್ಲೇ ಪೋಷಕರು ಗೋಳಾಡಿದ್ದಾರೆ. ಘಟನೆ ಕಣ್ಣಾರೆ ಕಂಡು ಸಾರ್ವಜನಿಕರು ದಿಗ್ಭ್ರಮೆಗೊಂಡಿದ್ದಾರೆ. ಸಂಚಾರಿ ಪೊಲೀಸರ ವಿರುದ್ಧ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…