Featured

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಕೊಪ್ಪಳ: ಟ್ರ‍್ಯಾಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಕೊಪ್ಪಳದ ಹುಲಿಗೆಮ್ಮ ದೇವಾಲಯಕ್ಕೆ ಭಕ್ತಾದಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಒಂದು ತುಂಗಭದ್ರಾ ಸೇತುವೆಯ ಮೇಲಿಂದ ಕೆಳಗೆಬಿದ್ದ ಪರಿಣಾಮ ಚಿಕ್ಕ ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

 

ಇದನ್ನೂ ಓದಿ: 

ದುರ್ಘಟನೆಯ ಬಗ್ಗೆ ಸಂಸದರಾದ ತುಕಾರಾಂ ಅವರೊಂದಿಗೆ ಮಾತನಾಡಿ, ಮಾಹಿತಿ ಪಡೆದುಕೊಂಡಿದ್ದೇನೆ. ಮೃತರೆಲ್ಲರೂ ಬಡ ಕುಟುಂಬಕ್ಕೆ ಸೇರಿದವರು, ಈ ಸಾವುಗಳು ಅವರ ಕುಟುಂಬದವರನ್ನು ಮತ್ತಷ್ಟು ಕಷ್ಟಕ್ಕೆ ನೂಕುವ ಹಿನ್ನೆಲೆಯಲ್ಲಿ, ಮಾನವೀಯ ನೆಲೆಯಲ್ಲಿ ಮೃತರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಏನಿದು ಘಟನೆ?
ಕೊಪ್ಪಳ ಜಿಲ್ಲೆಯ ಮುನಿರಾಬಾದ್  ಬಳಿ ಟ್ರ‍್ಯಾಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ ಏಳು ಮಂದಿ ಸಾವನ್ನಪ್ಪಿದ್ದರು. ಹಿಂದಿನಿಂದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಟ್ರ‍್ಯಾಕ್ಟರ್ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಪರಿಣಾಮ ಮಗು ಸೇರಿ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: 

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

15 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

15 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

16 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

16 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

18 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

18 hours ago