Featured

ಡಬಲ್ ಇಂಜಿನ್ ನಿಂದ ಹೊಗೆ ಬಂತೇ ಹೊರತು ಇಂಜಿನ್ ಮುಂದೆ ಹೋಗಲಿಲ್ಲ: ಡಿಕೆ ಶಿವಕುಮಾರ್ – Vishwanews24

ಡಬಲ್ ಇಂಜಿನ್ ನಿಂದ ಹೊಗೆ ಬಂತೇ ಹೊರತು ಇಂಜಿನ್ ಮುಂದೆ ಹೋಗಲಿಲ್ಲ: ಡಿಕೆ ಶಿವಕುಮಾರ್

ಮೈಸೂರು: ಇವರ ಡಬಲ್ ಇಂಜಿನ್ ಸರ್ಕಾರ ಹೈ ಸ್ಪೀಡಾಗಿ ಹೋಗಿಲ್ಲ. ಅದರಿಂದ ಕೇವಲ ಹೊಗೆ ಬಂತೇ ಹೊರತು, ಇಂಜಿನ್ ಮುಂದೆ ಹೋಗಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಲೇವಡಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳಿನ ರಾಜ್ಯ ಸರ್ಕಾರದ ಬಜೆಟ್ ಅಂತಿಮ‌ ಬಜೆಟ್ ಇರಲಿದೆ.

ಹಿಂದಿನ ವರ್ಷದ ಬಜೆಟ್ ಕೇವಲ ಘೋಷಣೆ, ಭರವಸೆಗಳ ಭಾಷಣದ ಬಜೆಟ್ ಆಗಿತ್ತು. ಕಳೆದ ಬಾರಿಯ ಬಜೆಟ್ ಪುಸ್ತಕ ನನ್ನ ಬಳಿಯಿದೆ. ಜನರಿಗೆ ಎಷ್ಟು ಭರವಸೆ ಕೊಟ್ಟಿದ್ದರು, ಎಷ್ಟು ಅನುಷ್ಠಾನಕ್ಕೆ ತಂದರೆಂದು ಬೊಮ್ಮಾಯಿ ಅವರು ಇಂದು ಸಂಜೆಯೊಳಗೆ ಹೇಳಬೇಕು. ನಾನು ಜನರಿಗೆ ನುಡಿದಂತೆ ನಡೆದಿದ್ದೇನೆ ಅಂತ ಬಸವರಾಜ ಬೊಮ್ಮಾಯಿ ಸಂಜೆಯೊಳಗೆ ಹೇಳಬೇಕು. ಹಿಂದಿನ ಬಜೆಟ್ ಜಾರಿಯಾಗದೆ ಮತ್ತೆ ಬಜೆಟ್ ಮಾಡಿದರೆ ಅದು ಭಾಷಣ ಮಾತ್ರ ಆಗುತ್ತದೆ ಎಂದರು.

ನಿಮ್ಮ ಪ್ರಣಾಳಿಕೆಯ 90% ಜಾರಿಗೆ ತರಲಾಗಿಲ್ಲ. ಯಡಿಯೂರಪ್ಪ ಹಸಿರು ಟವೆಲ್ ಹಾಕೊಂಡು ಪ್ರಮಾಣ ವಚನ ಸ್ವೀಕರಿಸಿದ್ದರು. ರೈತರಿಗೆ ಮೀಸಲಾದ ಕಾರ್ಯಕ್ರಮ ಬಜೆಟ್‌ನಲ್ಲಿ ತರಬೇಕಿತ್ತು. ಆದರೆ ಬರಿ ಸುಳ್ಳು ಹೇಳುತ್ತಿದ್ದೀರಿ. ಯಾವ ರೈತನಿಗೆ ಆದಾಯ ಒಂದುವರೆ ಪಟ್ಟಾಗಿದೆ ಹೇಳಿ? ರೈತ ಬಂಧು ಆವರ್ಥ ನಿಧಿ ಎಲ್ಲಿಟ್ಟಿದ್ದೀರಿ ಹೇಳಿ. ರೈತರ ಪಂಪ್‌ಸೆಟ್‌ಗೆ 10 ಗಂಟೆ ಉಚಿತ ವಿದ್ಯುತ್ ಕೊಟ್ಟಿದ್ದೀರಾ. ನಮಗೆ ಉಚಿತ ವಿದ್ಯುತ್ ಬಗ್ಗೆ ಟೀಕೆ ಮಾಡುತ್ತೀರಿ. ಹಾಗಾದ್ರೆ ನೀವು ಯಾಕೆ ಹೇಳಿದ್ದೀರಿ ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದರು.

ಮೈಸೂರು- ಬೆಂಗಳೂರು ಹೈವೇಯಲ್ಲಿ 250 ರೂಪಾಯಿ ಟೋಲ್‌ ನಿಗದಿಗೆ ಆಕ್ರೋಶ ಹೊರಹಾಕಿದ ಅವರು, ಸರ್ವಿಸ್ ರಸ್ತೆ ನೀಡುವವರೆಗೂ ಟೋಲ್ ಸಂಗ್ರಹ ಮಾಡಕೂಡದು. ಟೋಲ್ ಕಟ್ಟಲು ಆಗದವರಿಗೆ ಸರ್ವಿಸ್ ರೋಡ್ ವ್ಯವಸ್ಥೆ ಮಾಡಿದ ನಂತರ ಟೋಲ್ ಸಂಗ್ರಹ ಮಾಡಿ. ಮೋದಿಯವರು ಮೈಸೂರನ್ನು ಪ್ಯಾರಿಸ್ ಮಾಡುತ್ತೇವೆ ಎಂದಿದ್ದರು, ಆದರೆ ಪ್ಯಾರಿಸ್ ಮಾಡೋದು ಬೇಡ. ಪ್ಯಾರಿಸ್ ಮಾದರಿಯಲ್ಲಿ ಒಂದು ರಸ್ತೆಯನ್ನಾದರೂ ನಿರ್ಮಿಸಿಕೊಡಿ ಸಾಕು ಎಂದರು.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

15 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

16 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

18 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

18 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

18 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

18 hours ago