Featured

ಡಾನ್ಸ್ ರಿಯಾಲಿಟಿ ಶೋಗಳಲ್ಲಿ ಮಕ್ಕಳನ್ನು ಕೆಟ್ಟದಾಗಿ, ಅಸಭ್ಯವಾಗಿ ತೋರಿಸುವ ಚಾನೆಲ್ ಗಳಿಗೆ ಎಚ್ಚರಿಕೆ -Vishwanews24

ನವದೆಹಲಿ,: ಮಕ್ಕಳನ್ನು ಕೆಟ್ಟದಾಗಿ, ಅಸಭ್ಯವಾಗಿ ತೋರಿಸುವ ಚಾನೆಲ್ ಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಎಚ್ಚರಿಕೆ ನೀಡಿದೆ.

ಡಾನ್ಸ್ ರಿಯಾಲಿಟಿ ಶೋಗಳ ಹೆಸರಿನಲ್ಲಿ ಮಕ್ಕಳನ್ನು ಅಸಭ್ಯ, ಪ್ರಚೋದನಾಕಾರಿಯಾಗಿ ಬಿಂಬಿಸುವ ಎಲ್ಲಾ ಖಾಸಗಿ ಚಾನೆಲ್ ಗಳಿಗೂ ಸಚಿವಾಲಯ ಎಚ್ಚರಿಕೆ ನೀಡಿದೆ.

ಡಾನ್ಸ್ ರಿಯಾಲಿಟಿ ಶೋ ಗಳಲ್ಲಿ ವಯಸ್ಕರು ಅಭಿನಯಿಸಿದ, ನೃತ್ಯ ಪ್ರದರ್ಶನ ನೀಡಿದ ಹಾಡುಗಳಿಗೆ ಚಿಕ್ಕ ಮಕ್ಕಳು ಅಭಿನಯಿಸುತ್ತಾರೆ. ಅದರಿಂದ ಮಕ್ಕಳು ವಯೋಸಹಜವಲ್ಲದ ವರ್ತನೆಯಲ್ಲಿ ತೊಡಗಬೇಕಾಗುತ್ತದೆ. ಇದು ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ.

ಚಾನೆಲ್ ಗಳು ತಮ್ಮ ಸ್ವಾರ್ಥಕ್ಕಾಗಿ ಮಕ್ಕಳನ್ನು ಹೀಗೆ ಅಸಭ್ಯ, ಸಮ್ಮತವಲ್ಲದ ರೀತಿಯಲ್ಲಿ ಚಿತ್ರಿಸುವುದು ಸರಿಯಲ್ಲ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಖಡಕ್ ವಾರ್ನಿಂಗ್ ನೀಡಿದೆ.

1995 ರ ಕೇಬಲ್ ಟೆಲಿವಿಶನ್ ನೆಟ್ ವರ್ಕ್ ಕಾಯ್ದೆಯಲ್ಲಿ ಹೇಳಿರುವ ನಿಯಮಗಳಿಗೆ ಎಲ್ಲಾ ಖಾಸಗಿ ಚಾನೆಲ್ ಗಳೂ ಬದ್ಧರಾಗಿರಬೇಕು ಎಂದು ಅದು ಹೇಳಿದೆ. ಈ ನಿಯಮದ ಪ್ರಕಾರ ಮಕ್ಕಳನ್ನು ಅಸಭ್ಯವಾಗಿ ಚಿತ್ರಿಸುವ ಅಥವಾ ಅವರಿಗೆ ಮಾನಿಸಿಕ ಅಥವಾ ದೈಹಿಕವಾಗಿ ಹಿಂಸೆ ನೀದುವ ಯಾವುದೇ ರೀತಿಯ ಕಾರ್ಯಕ್ರಮವನ್ನು ಮಾಡುವಂತಿಲ್ಲ ಎಂದು ಅದು ಹೇಳಿದೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

14 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

14 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

14 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

15 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

15 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

15 hours ago