Featured

ಡಾ.ಎಮ್.ಎನ್ ಅರ್ ಮುಡಿಗೆ ಅಂತಾರಾಷ್ಟ್ರೀಯ ನಾಯಕತ್ವ ಆವಿಷ್ಕಾರದ ಶ್ರೇಷ್ಠತೆ ಪ್ರಶಸ್ತಿ.


ಡಾ.ಎಮ್.ಎನ್ ಅರ್ ಮುಡಿಗೆ ಅಂತಾರಾಷ್ಟ್ರೀಯ ನಾಯಕತ್ವ ಆವಿಷ್ಕಾರದ ಶ್ರೇಷ್ಠತೆ ಪ್ರಶಸ್ತಿ.

ಮಂಗಳೂರು: ಸಹಕಾರಿ ರಂಗದ ದಿಗ್ಗಜ,ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಮ್.ಎನ್ ರಾಜೇಂದ್ರ ಕುಮಾರ್ ಅವರಿಗೆ ಅಂತಾರಾಷ್ಟ್ರೀಯ ನಾಯಕತ್ವ ಆವಿಷ್ಕಾರದಲ್ಲಿ ಶ್ರೇಷ್ಠತೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹೊಸ ದಿಲ್ಲಿಯ ಇನ್ಸ್ಟಿಟ್ಯುಟ್ ಆಫ್ ಎಕನಾಮಿಕ್ ಸ್ಟಡೀಸ್ ಸಂಸ್ಥೆ ಶ್ರೀಲಂಕಾದ ಹೋಟೆಲ್ ತಾಜ್ ಸಮುದ್ರದಲ್ಲಿ ಡಿಸೆಂಬರ್ ೨೭ ರಂದು ಆಯೋಜಿಸಿರುವ ಇಂಡೋ-ಶ್ರೀಲಂಕಾ ಎಕನಾಮಿಕ್ ಕೋ-ಆಪರೇಶನ್ ಕಾನ್ಫರೆನ್ಸ್ ನಲ್ಲಿ ಡಾ.ಎಮ್.ಎನ್.ರಾಜೇಂದ್ರ ಕುಮಾರ್ ಈ ಪ್ರಶಸ್ತಿ ಸ್ವೀಕರಸಲಿದ್ದಾರೆ.

ಸಹಕಾರಿ ರಂಗದಲ್ಲಿ ಹೊಸ ಆವಿ‍ಷ್ಕಾರದೊಂದಿಗೆ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಾ ,ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಗೆ ಘನತೆ ತಂದುಕೊಟ್ಟ ಇವರು ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ತಂದು ಕೊಟ್ಟಿದ್ದಾರೆ.

25 ವರ್ಷಗಳಿಂದ ಸಮರ್ಥ ನಾಯಕತ್ವದಿಂದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ್ನು ೨೫ ವರ್ಷಗಳಿಂದ ಮುನ್ನಡೆಸುತ್ತಿರುವ ಇವರು ಈ ಬ್ಯಾಂಕ್ ನ್ನು ಜನಸ್ನೇಹಿ ಬ್ಯಾಂಕನ್ನಾಗಿ ರೂಪಿಸಿದ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ.

ಇವರು ಅಧ್ಯಕ್ಷರಾದ ಬಳಿಕ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿಗೆ 19 ವರ್ಷಗಳಿಂದ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಹಾಗೂ 17 ವರ್ಷಗಳಿಂದ ನಬಾರ್ಡ್ ಪ್ರಶಸ್ತಿ ಲಭಿಸಿದೆ.

ಸಹಕಾರಿ ರಂಗದಲ್ಲಿ ವಿಶಿಷ್ಟ ಸಾಧನೆಗೆ ಹಲವು ಅಂತರಾಷ್ಟ್ರೀಯ ಪ್ರಸಸ್ತಿಗಳು ಮತ್ತು ಕರ್ನಾಟಕ ಸರ್ಕಾರ ನೀಡಿದ ಸಹಕಾರ ರತ್ನ ಪ್ರಶಸ್ತಿಯೂ ಒಲಿದು ಬಂದಿದೆ.

ವರದಿ: ಪುರುಷೋತ್ತಮ ಸಾಲಿಯಾನ್, ವಿಶ್ವನ್ಯೂಸ್24

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

8 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

9 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

9 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

10 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

10 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago