ಉಡುಪಿ: ಕರಾವಳಿ ಪ್ರವಾಸದಲ್ಲಿ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಉಡುಪಿಯಲ್ಲಿ ಹಿಂದು ಸಾಮ್ರಾಟ್ ಎಂಬ ಬಿರುದು ಹಾಗೂ ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಮೋಹನ್ ಭಾಗವತ್ ಅವರು ಉಡುಪಿ ಜಿಲ್ಲೆಗೆ ಭಾನುವಾರ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಗೀತಾಮಂದಿರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಹಿಂದು ಸಾಮ್ರಾಟ್ ಎಂಬ ಬಿರುದು ಹಾಗೂ ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಶ್ರೀಕೃಷ್ಣ ದರ್ಶನದ ಬಳಿಕ ಡಾ ಭಾಗವತ್ ಗೀತಾಮಂದಿರಕ್ಕೆ ಭೇಟಿ ನೀಡಿದರು .ಶ್ರೀಗಳು ಅಲ್ಲಿನ ಗೀತಾಶಿಲಾ ಲೇಖನ ಧ್ಯಾನ ಮಂದಿರ ,ವಾದಿರಾಜ ಸಂಶೋಧನ ಮಂದಿರಗಳನ್ನು ಪರಿಚಯಿಸಿ ನಡೆಸುತ್ತಿರುವ ಚಟುವಟಿಕೆಗಳನ್ನು ವಿವರಿಸಿದರು. ತಮ್ಮ ಚತುರ್ಥ ಪರ್ಯಾಯಾವಧಿಯ ಅತ್ಯಂತ ದೂರದೃಷ್ಟಿಯ ಕೋಟಿ ಗೀತಾಲೇಖನ ಯಜ್ಞದ ಕುರಿತೂ ವಿವರಿಸಿದರು.
ಸಂಘದ ಹಿರಿಯ ಮುಖಂಡ ಮುಕುಂದ ಜೀ ,ಉಡುಪಿಯ ಪ್ರಮುಖ್ ನರತನ್ ಶೆಣೈ,ಮಠದ ದಿವಾನರಾದ ಎಂ ನಾಗರಾಜ ಆಚಾರ್ಯ ,ಮಟ್ಟಿ ಲಕ್ಷ್ಮಿನಾರಾಯಣ ರಾವ್,ಪ್ರಮೋದ್ ಸಾಗರ್ ಸಂತೋಷ್ ಶೆಟ್ಟಿ ,,ಶ್ರೀ ಮಠದ ವೈದಿಕ ವಿದ್ವಾಂಸರು,ಗಣ್ಯ ನಾಗರಿಕರು ಮೊದಲಾದವರು ಭಾಗವಹಿಸಿದ್ದರು.
ಆರಂಭದಲ್ಲಿ ಮಠದ ಮುಂಭಾಗದಲ್ಲಿ ಭಾಗವತ್ ಅವರನ್ನು ವಾದ್ಯ, ಚಂಡೆವಾದನ ಮಂತ್ರಘೋಷ ಸಹಿತ ಮಠದ ಸಾಂಪದ್ರದಾಯಿಕ ಗೌರವಗಳೊಂದಿಗೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…