ಬೆಂಗಳೂರು: ಈ ಬಾರಿಯ ಡಾ. ವಿಷ್ಣುವರ್ಧನ್ ರಾಷ್ಟ್ರ ಪ್ರಶಸ್ತಿಗೆ ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಸಾಹಸ ಸಿಂಹ ವಿಷ್ಣುವರ್ಧನ್ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತ ಬಂದಿದ್ದು, 2019ನೇ ಸಾಲಿನ ಪ್ರಶಸ್ತಿಯನ್ನು ರಮೇಶ್ ಅರವಿಂದ್ ಅವರಿಗೆ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ.
ವೀರಕಪುತ್ರ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಡಾ. ವಿಷ್ಣು ಸೇನಾ ಸಮಿತಿಯು 2017ರಿಂದ ಪ್ರತಿ ವರ್ಷ ಒಬ್ಬರಿಗೆ ವಿಷ್ಣುವರ್ಧನ್ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ ನೀಡುತ್ತ ಬಂದಿದೆ. ವಿಷ್ಣುವರ್ಧನ್ ಅವರ 69ನೇ ಜನ್ಮದಿನದ ಪ್ರಯುಕ್ತ ಸೆ.18 ರಿಂದ 20 ರ ತನಕ ಮೂರು ದಿನಗಳ ಕಾಲ ನಡೆಯಲಿರುವ ಡಾ. ವಿಷ್ಣುವರ್ಧನ್ ನಾಟಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಸಂಜೆ 4.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸದರಿ ಪ್ರಶಸ್ತಿಯು ಅಭಿನಂದನಾ ಪತ್ರ, ಪ್ರಶಸ್ತಿ ಫಲಕ, ಫಲ- ಪುಷ್ಪಗಳ ಸಹಿತ 25 ಸಾವಿರ ರು. ನಗದನ್ನು ಒಳಗೊಂಡಿದೆ ಎಂದು ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ತಿಳಿಸಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…