ಬೆಂಗಳೂರು: ಈ ಬಾರಿಯ ಡಾ. ವಿಷ್ಣುವರ್ಧನ್ ರಾಷ್ಟ್ರ ಪ್ರಶಸ್ತಿಗೆ ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಸಾಹಸ ಸಿಂಹ ವಿಷ್ಣುವರ್ಧನ್ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತ ಬಂದಿದ್ದು, 2019ನೇ ಸಾಲಿನ ಪ್ರಶಸ್ತಿಯನ್ನು ರಮೇಶ್ ಅರವಿಂದ್ ಅವರಿಗೆ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ.
ವೀರಕಪುತ್ರ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಡಾ. ವಿಷ್ಣು ಸೇನಾ ಸಮಿತಿಯು 2017ರಿಂದ ಪ್ರತಿ ವರ್ಷ ಒಬ್ಬರಿಗೆ ವಿಷ್ಣುವರ್ಧನ್ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ ನೀಡುತ್ತ ಬಂದಿದೆ. ವಿಷ್ಣುವರ್ಧನ್ ಅವರ 69ನೇ ಜನ್ಮದಿನದ ಪ್ರಯುಕ್ತ ಸೆ.18 ರಿಂದ 20 ರ ತನಕ ಮೂರು ದಿನಗಳ ಕಾಲ ನಡೆಯಲಿರುವ ಡಾ. ವಿಷ್ಣುವರ್ಧನ್ ನಾಟಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಸಂಜೆ 4.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸದರಿ ಪ್ರಶಸ್ತಿಯು ಅಭಿನಂದನಾ ಪತ್ರ, ಪ್ರಶಸ್ತಿ ಫಲಕ, ಫಲ- ಪುಷ್ಪಗಳ ಸಹಿತ 25 ಸಾವಿರ ರು. ನಗದನ್ನು ಒಳಗೊಂಡಿದೆ ಎಂದು ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ತಿಳಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…