ಬೆಂಗಳೂರು : ಸುಪ್ರಸಿದ್ಧ ವಿಜ್ಞಾನ ಬರಹಗಾರ, ಡಿ.ಆರ್.ಡಿ.ಒ ಮಾಜಿ ವಿಜ್ಞಾನಿ, ಹೆಚ್.ಎ.ಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್ ಸುಧೀಂದ್ರ ಹಾಲ್ದೊಡ್ಡೇರಿ ಜುಲೈ 2 ರಂದು ಮಧ್ಯಾಹ್ನ ನಿಧನರಾಗಿದ್ದಾರೆ.
ಅವರಿಗೆ 61 ವರ್ಷ ವಯಸ್ಸಾಗಿದ್ದ ಅವರಿಗೆ ಕಳೆದ ಒಂದು ವಾರದ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಹಿಂದೆ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು ಅವರ ಮೆದುಳು ನಿಷ್ಕ್ರಿಯ (Brain Dead) ಹಂತಕ್ಕೆ ತಲುಪಿದೆ. ಪರಿಸ್ಥಿತಿ ಕಷ್ಟವಿದೆ ಎಂದು ಹೇಳಿದ್ದರು
ಸುಧೀಂದ್ರ ಹಾಲ್ದೊಡ್ಡೇರಿ ಅವರ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುವುದು ಸ್ಥಗಿತಗೊಂಡಿದ್ದರಿಂದ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ದೇಹದಾನಕ್ಕೆ ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸುಧೀಂದ್ರ ಹಾಲ್ದೊಡ್ಡೇರಿ ಅವರು ಹಲವು ಪತ್ರಿಕೆಗಳಲ್ಲಿ ವಿಜ್ಞಾನ ಬರಹಗಾರರಾಗಿದ್ದರು. ಇನ್ನು ಹಾಲ್ದೊಡ್ಡೇರಿಯವರಿಗೆ ಅನುಪಮಾ ನಿರಂಜನ ವೈದ್ಯಕೀಯ ವಿಜ್ಞಾನ ಪ್ರಶಸ್ತಿ ಬಂದಿದ್ದು, ಪ್ರಶಸ್ತಿ ಬಂದ ದಿನವೇ ವಿಧಿವಶರಾಗಿರುವುದು ಖೇದಕರವಾಗಿದೆ.
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…