ಬೆಂಗಳೂರು : ಸುಪ್ರಸಿದ್ಧ ವಿಜ್ಞಾನ ಬರಹಗಾರ, ಡಿ.ಆರ್.ಡಿ.ಒ ಮಾಜಿ ವಿಜ್ಞಾನಿ, ಹೆಚ್.ಎ.ಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್ ಸುಧೀಂದ್ರ ಹಾಲ್ದೊಡ್ಡೇರಿ ಜುಲೈ 2 ರಂದು ಮಧ್ಯಾಹ್ನ ನಿಧನರಾಗಿದ್ದಾರೆ.
ಅವರಿಗೆ 61 ವರ್ಷ ವಯಸ್ಸಾಗಿದ್ದ ಅವರಿಗೆ ಕಳೆದ ಒಂದು ವಾರದ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಹಿಂದೆ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು ಅವರ ಮೆದುಳು ನಿಷ್ಕ್ರಿಯ (Brain Dead) ಹಂತಕ್ಕೆ ತಲುಪಿದೆ. ಪರಿಸ್ಥಿತಿ ಕಷ್ಟವಿದೆ ಎಂದು ಹೇಳಿದ್ದರು
ಸುಧೀಂದ್ರ ಹಾಲ್ದೊಡ್ಡೇರಿ ಅವರ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುವುದು ಸ್ಥಗಿತಗೊಂಡಿದ್ದರಿಂದ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ದೇಹದಾನಕ್ಕೆ ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸುಧೀಂದ್ರ ಹಾಲ್ದೊಡ್ಡೇರಿ ಅವರು ಹಲವು ಪತ್ರಿಕೆಗಳಲ್ಲಿ ವಿಜ್ಞಾನ ಬರಹಗಾರರಾಗಿದ್ದರು. ಇನ್ನು ಹಾಲ್ದೊಡ್ಡೇರಿಯವರಿಗೆ ಅನುಪಮಾ ನಿರಂಜನ ವೈದ್ಯಕೀಯ ವಿಜ್ಞಾನ ಪ್ರಶಸ್ತಿ ಬಂದಿದ್ದು, ಪ್ರಶಸ್ತಿ ಬಂದ ದಿನವೇ ವಿಧಿವಶರಾಗಿರುವುದು ಖೇದಕರವಾಗಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…