ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಸಿಎಂ ಪಟ್ಟ ಯಾರಿಗೆ ಒಲಿಯುತ್ತದೆ ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡಿದೆ. ಇದರ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಕಾಲಜ್ಞಾನ ಗುರುಜಿ ಆಗಮಿಸಿ ಶುಭ ಹಾರೈಸಿದ್ದಾರೆ.
ಹಲವು ವರ್ಷಗಳಿಂದ ಡಿಕೆಶಿ ಅವರ ಭವಿಷ್ಯದ ಬಗ್ಗೆ ತಿಳಿಸುತ್ತಿದ್ದ ವಿಜಯ್ರಾಜ್ ಗುರೂಜಿ ಸೋಮವಾರ ಎಲೆಕ್ಟ್ರಾನಿಕ್ ಸಿಟಿಯಿಂದ ಡಿಕೆಶಿ ನಿವಾಸಕ್ಕೆ ಆಗಮಿಸಿದ್ದಾರೆ. ಮುಂಜಾನೆ 4:15ರ ಸುಮಾರಿಗೆ ಆಗಮಿಸಿದ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆಶಿಗೆ ಶುಭ ಹಾರೈಸಿದ್ದಾರೆ.
ಕಾಲಜ್ಞಾನದ ಬಗ್ಗೆ ಪಾಂಡಿತ್ಯ ಪಡೆದಿರುವ ವಿಜಯ್ರಾಜ್ ಗುರೂಜಿ ಪ್ರಸ್ತುತ ಡಿಕೆಶಿಗೆ ಬುಧ ಮತ್ತು ಆದಿತ್ಯ ಪಂಚಮಯೋಗವಿದೆ ಎಂದು ತಿಳಿಸಿ ಅವರಿಗೆ ಹಾರ ಹಾಕಿ ಆಶಿರ್ವಾದ ಮಾಡಿ ಅಲ್ಲಿಂದ ತೆರಳಿದ್ದಾರೆ.
ನಿಮ್ಮ ಜಾತಕದಲ್ಲಿ ಗುರುವಾರದ ದಿನ ತುಂಬಾ ಒಳ್ಳೆಯದಿದೆ. ಅಂದೇ ಶುಭ ಕೆಲಸ ಆರಂಭಿಸಿ ಎಂಬ ಸಲಹೆಯನ್ನು ಡಿಕೆಶಿಗೆ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಗುರುವಾರ ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನಡೆಯುತ್ತಾ ಎಂಬ ಪ್ರಶ್ನೆಗೆ ಇಂದು ಅಥವಾ ನಾಳೆ ಉತ್ತರ ಸಿಗುವ ಸಾಧ್ಯತೆಯಿದೆ.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…