ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಸಿಎಂ ಪಟ್ಟ ಯಾರಿಗೆ ಒಲಿಯುತ್ತದೆ ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡಿದೆ. ಇದರ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಕಾಲಜ್ಞಾನ ಗುರುಜಿ ಆಗಮಿಸಿ ಶುಭ ಹಾರೈಸಿದ್ದಾರೆ.
ಹಲವು ವರ್ಷಗಳಿಂದ ಡಿಕೆಶಿ ಅವರ ಭವಿಷ್ಯದ ಬಗ್ಗೆ ತಿಳಿಸುತ್ತಿದ್ದ ವಿಜಯ್ರಾಜ್ ಗುರೂಜಿ ಸೋಮವಾರ ಎಲೆಕ್ಟ್ರಾನಿಕ್ ಸಿಟಿಯಿಂದ ಡಿಕೆಶಿ ನಿವಾಸಕ್ಕೆ ಆಗಮಿಸಿದ್ದಾರೆ. ಮುಂಜಾನೆ 4:15ರ ಸುಮಾರಿಗೆ ಆಗಮಿಸಿದ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಕೆಶಿಗೆ ಶುಭ ಹಾರೈಸಿದ್ದಾರೆ.
ಕಾಲಜ್ಞಾನದ ಬಗ್ಗೆ ಪಾಂಡಿತ್ಯ ಪಡೆದಿರುವ ವಿಜಯ್ರಾಜ್ ಗುರೂಜಿ ಪ್ರಸ್ತುತ ಡಿಕೆಶಿಗೆ ಬುಧ ಮತ್ತು ಆದಿತ್ಯ ಪಂಚಮಯೋಗವಿದೆ ಎಂದು ತಿಳಿಸಿ ಅವರಿಗೆ ಹಾರ ಹಾಕಿ ಆಶಿರ್ವಾದ ಮಾಡಿ ಅಲ್ಲಿಂದ ತೆರಳಿದ್ದಾರೆ.
ನಿಮ್ಮ ಜಾತಕದಲ್ಲಿ ಗುರುವಾರದ ದಿನ ತುಂಬಾ ಒಳ್ಳೆಯದಿದೆ. ಅಂದೇ ಶುಭ ಕೆಲಸ ಆರಂಭಿಸಿ ಎಂಬ ಸಲಹೆಯನ್ನು ಡಿಕೆಶಿಗೆ ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಗುರುವಾರ ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನಡೆಯುತ್ತಾ ಎಂಬ ಪ್ರಶ್ನೆಗೆ ಇಂದು ಅಥವಾ ನಾಳೆ ಉತ್ತರ ಸಿಗುವ ಸಾಧ್ಯತೆಯಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…