ಮಂಡ್ಯ : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರು ನಿನ್ನೆ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಹೃದಯಘಾತದಿಂದ ಸಾವನ್ನಪ್ಪಿದ್ದು ಇಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸ್ವಗ್ರಾಮವಾದ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅದಕ್ಕೂ ಮುನ್ನ ಸರ್ಕಾರದಿಂದ ಸಕಲ ಗೌರವಗಳೊಂದಿಗೆ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು.
ಮಾಜಿ ಸಿಎಂ ಎಸ್ಎಂ ಕೃಷ್ಣ ವಿಧಿವಶ ಹಿನ್ನೆಲೆಯಲ್ಲಿ ಸರ್ಕಾರದಿಂದ ಗೌರವ ವಂದನೆ ಸಮರ್ಪಿಸಲಾಯಿತು. ಸರ್ಕಾರದಿಂದ ಎಸ್ಎಂ ಕೃಷ್ಣಗೆ ಅಂತಿಮ ಗೌರವ ನಮನ ಸಲ್ಲಿಸಲಾಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು.
ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರ ಗೀತೆ ನುಡಿಸಿ ಗೌರವ ನಮನ ಸಲ್ಲಿಸಲಾಯಿತು.
ಡಿಕೆಶಿಯಿಂದ ಕಣ್ಣೀರ ಬೀಳ್ಕೊಡುಗೆ
ಸಕಲ ಸರ್ಕಾರಿ ಗೌರವ ನಮನ ಸಲ್ಲಿಸಿದ ಬಳಿಕ, ಮೂರು ಬಾರಿ ಕುಶಾಲು ತೋಪು ಸಿಡಿಸಿ ಗೌರವ ಸೂಚಿಸಲಾಯಿತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಂತ್ಯಕ್ರಿಯೆಗೊಂಡ ಅಂತಿಮ ನಮ ಸಲ್ಲಿಸಿದರು. ಅವರ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಅವರು ಆಗಮಿಸಿ ಗೌರವ ನಮನ ಸಲ್ಲಿಸುವ ವೇಳೆ SM ಕೃಷ್ಣ ಪಾರ್ಥಿವ ಶರೀರಕ್ಕೆ ನಮಿಸಿ ಕಣ್ಣೀರು ಹಾಕಿದರು. ತಮ್ಮ ರಾಜಕೀಯ ಗುರುವಿನ ಪಾರ್ಥಿವ ಶರೀರದ ಮುಂದೆ ಕಣ್ಣೀರಾಕಿ ವಾಪಸ್ಸಾದ ಘಟನೆ ನಡೆಯಿತು.
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…