Featured

ಡಿಕೆಶಿ ಅವರನ್ನು ಬಂಧಿಸಲು ಸಿದ್ದರಾಮಯ್ಯ ಅವರೇ ಕಾರಣ : ನಳೀನ್ ಕುಮಾರ್ ಕಟೀಲ್ ಗಂಭೀರ ಆರೋಪ -Vishwanews24

ಬೆಂಗಳೂರು: ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದರ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗಂಭೀರವಾಗಿ ಆರೋಪಿಸಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ದ್ವೇಷದಿಂದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ಕಾಂಗ್ರೆಸ್-ಜೆಡಿಎಸ್ ನಾಯಕರು ರಾಜ್ಯ ಸರ್ಕಾರ ವಿರುದ್ದ ಆರೋಪ ಹೊರಿಸುತ್ತಿದ್ದು, ಈ ಆರೋಪ ಸುಳ್ಳು ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಡಿಕೆಶಿ ಅವರನ್ನು ಬಂಧಿಸಲು ಸಿದ್ದರಾಮಯ್ಯ ಅವರೇ ಕಾರಣ ಎಂದರು. ಈ ಬಗ್ಗೆ ನಮಗೆ ಸಿದ್ದರಾಮಯ್ಯ ಮೇಲೆ ಸಂಶಯ ಇದ್ದು, ಡಿಕೆಶಿ ಬೆಳೆಯುತ್ತಾರೆಂದು ಅವರನ್ನು ಮಟ್ಟ ಹಾಕಲು ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಲೇ ಇದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷ ಒಳಗೊಳಗೆ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಕಟೀಲ್ ಆರೋಪಿಸಿದ್ದಾರೆ.

2017ರಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಇರುವಾಗ ಐಟಿ ದಾಳಿ ನಡೆಯಿತು. ಆಗ ಡಿಕೆಶಿ ಮನೆ ಮೇಲೆ ಕೂಡ ಐಟಿ ದಾಳಿ ನಡೆಸಿತ್ತು. ಆಗ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದರು. ತಮ್ಮ ಪಕ್ಷದ ನಾಯಕನ ವಿರುದ್ಧ ಆರೋಪ ಬಂದಾಗ ಸಿದ್ದರಾಮಯ್ಯ ನಿಲ್ಲಿಸಬಹುದಿತ್ತು ಆದರೆ ಅವರು ನಿಲ್ಲಿಸಲಿಲ್ಲ ಎಂದು ಪ್ರಶ್ನಿಸಿದರು. ಕಾಂಗ್ರೆಸ್​ನವರಿಗೆ ತಮ್ಮ ತಪ್ಪು ಮುಚ್ಚಿಹಾಕಿಕೊಳ್ಳಬೇಕಾಗಿದೆ. ಹೀಗಾಗಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ನಮ್ಮ ಸರ್ಕಾರಕ್ಕೆ ಯಾವುದೇ ರಾಜಕೀಯ ದ್ವೇಷವಿಲ್ಲ. ದ್ವೇಷವಿದ್ರೆ ಚುನಾವಣೆ ಮುಂಚೆ ಮಾಡಬಹುದಿತ್ತು ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.

ಡಿ. ಕೆ. ಶಿವಕುಮಾರ್ ಅವರ ಬಂಧನದ ಹಿಂದೆ ಯಾವುದೇ ರಾಜಕೀಯ ದ್ವೇಷವಿಲ್ಲ ಎಂದು ಸ್ಪಷ್ಟನೆ ನೀಡಿದ ಕಟೀಲ್, ರಾಜಕೀಯ ದ್ವೇಷ ಮಾಡೋದೇ ಆಗಿದ್ರೆ ಚುನಾವಣೆಗೆ ಮುನ್ನವೇ ಮಾಡಬಹುದಿತ್ತು, ಚುನಾವಣೆಗೆ ಮುಂಚೆಯೇ ಒಳಗೆ ಹಾಕಬಹುದಿತ್ತಲ್ಲ ಎಂದು ಪ್ರಶ್ನಿಸಿದ್ದಾರೆ. ಡಿಕೆಶಿ ಭ್ರಷ್ಟಾಚಾರ ಆರೋಪದಲ್ಲಿ ಒಳಗೆ ಹೋಗಿದ್ದಾರೆ. ಆದರೆ, ಕಾಂಗ್ರೆಸ್‌ನವರಿಗೆ ಈಗ ಮುಖ ಉಳಿಸಿಕೊಳ್ಳಬೇಕಾಗಿದೆ, ತಮ್ಮ ಮುಖ ಉಳಿಸಿಕೊಳ್ಳೋದಕ್ಕಾಗಿ ಹೀಗೆಲ್ಲಾ ಮಾತಾಡ್ತಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

1 hour ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

2 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

4 hours ago