ಬೆಂಗಳೂರು: ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದರ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗಂಭೀರವಾಗಿ ಆರೋಪಿಸಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ದ್ವೇಷದಿಂದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ಕಾಂಗ್ರೆಸ್-ಜೆಡಿಎಸ್ ನಾಯಕರು ರಾಜ್ಯ ಸರ್ಕಾರ ವಿರುದ್ದ ಆರೋಪ ಹೊರಿಸುತ್ತಿದ್ದು, ಈ ಆರೋಪ ಸುಳ್ಳು ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಡಿಕೆಶಿ ಅವರನ್ನು ಬಂಧಿಸಲು ಸಿದ್ದರಾಮಯ್ಯ ಅವರೇ ಕಾರಣ ಎಂದರು. ಈ ಬಗ್ಗೆ ನಮಗೆ ಸಿದ್ದರಾಮಯ್ಯ ಮೇಲೆ ಸಂಶಯ ಇದ್ದು, ಡಿಕೆಶಿ ಬೆಳೆಯುತ್ತಾರೆಂದು ಅವರನ್ನು ಮಟ್ಟ ಹಾಕಲು ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಲೇ ಇದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷ ಒಳಗೊಳಗೆ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಕಟೀಲ್ ಆರೋಪಿಸಿದ್ದಾರೆ.
2017ರಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಇರುವಾಗ ಐಟಿ ದಾಳಿ ನಡೆಯಿತು. ಆಗ ಡಿಕೆಶಿ ಮನೆ ಮೇಲೆ ಕೂಡ ಐಟಿ ದಾಳಿ ನಡೆಸಿತ್ತು. ಆಗ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದರು. ತಮ್ಮ ಪಕ್ಷದ ನಾಯಕನ ವಿರುದ್ಧ ಆರೋಪ ಬಂದಾಗ ಸಿದ್ದರಾಮಯ್ಯ ನಿಲ್ಲಿಸಬಹುದಿತ್ತು ಆದರೆ ಅವರು ನಿಲ್ಲಿಸಲಿಲ್ಲ ಎಂದು ಪ್ರಶ್ನಿಸಿದರು. ಕಾಂಗ್ರೆಸ್ನವರಿಗೆ ತಮ್ಮ ತಪ್ಪು ಮುಚ್ಚಿಹಾಕಿಕೊಳ್ಳಬೇಕಾಗಿದೆ. ಹೀಗಾಗಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ನಮ್ಮ ಸರ್ಕಾರಕ್ಕೆ ಯಾವುದೇ ರಾಜಕೀಯ ದ್ವೇಷವಿಲ್ಲ. ದ್ವೇಷವಿದ್ರೆ ಚುನಾವಣೆ ಮುಂಚೆ ಮಾಡಬಹುದಿತ್ತು ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.
ಡಿ. ಕೆ. ಶಿವಕುಮಾರ್ ಅವರ ಬಂಧನದ ಹಿಂದೆ ಯಾವುದೇ ರಾಜಕೀಯ ದ್ವೇಷವಿಲ್ಲ ಎಂದು ಸ್ಪಷ್ಟನೆ ನೀಡಿದ ಕಟೀಲ್, ರಾಜಕೀಯ ದ್ವೇಷ ಮಾಡೋದೇ ಆಗಿದ್ರೆ ಚುನಾವಣೆಗೆ ಮುನ್ನವೇ ಮಾಡಬಹುದಿತ್ತು, ಚುನಾವಣೆಗೆ ಮುಂಚೆಯೇ ಒಳಗೆ ಹಾಕಬಹುದಿತ್ತಲ್ಲ ಎಂದು ಪ್ರಶ್ನಿಸಿದ್ದಾರೆ. ಡಿಕೆಶಿ ಭ್ರಷ್ಟಾಚಾರ ಆರೋಪದಲ್ಲಿ ಒಳಗೆ ಹೋಗಿದ್ದಾರೆ. ಆದರೆ, ಕಾಂಗ್ರೆಸ್ನವರಿಗೆ ಈಗ ಮುಖ ಉಳಿಸಿಕೊಳ್ಳಬೇಕಾಗಿದೆ, ತಮ್ಮ ಮುಖ ಉಳಿಸಿಕೊಳ್ಳೋದಕ್ಕಾಗಿ ಹೀಗೆಲ್ಲಾ ಮಾತಾಡ್ತಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…