ಬೆಂಗಳೂರು: ಪ್ಭಾವಿ ರಾಜಕಾರಣಿ, ಕಾಂಗ್ರೆಸ್ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ಅವರಿಗೆ ಜಾಮೀನು ಸಿಗದಂತೆ ಮತ್ತು ಇ.ಡಿ. ಕಸ್ಟಡಿಗೆ ಒಪ್ಪಿಸುವಂತೆ ಪ್ರಬಲವಾಗಿ ವಾದ ಮಂಡಿಸಿದ್ದು, ನಮ್ಮ ರಾಜ್ಯದವರೇ ಆದ ಪುತ್ತೂರಿನ ಕೆ.ಎಂ. ನಟರಾಜ್.
ಡಿಕೆಶಿಗೆ ಜಾಮೀನು ಮಂಜೂರು ಮಾಡುವಂತೆ ಡಿಕೆಶಿ ಪರ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಪ್ರಬಲವಾಗಿ ವಾದಿಸಿದ್ದರು. ಮೊದಲ ಹಂತದಲ್ಲಿ ಯಶಸ್ವಿಯೂ ಆಗಿದ್ದಾರೆ. ಏಕೆಂದರೆ ಡಿಕೆಶಿ ಅವರನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯ 10 ದಿನಗಳ ಕಾಲ ಇ.ಡಿ. ವಶಕ್ಕೆ ಒಪ್ಪಿಸಿತು.
10 ದಿನ ಇ.ಡಿ. ವಶಕ್ಕೆ ಒಪ್ಪಿಸಿದ ನ್ಯಾಯಾಲಯ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕವಾಗಿರುವ ವಕೀಲ ಕೆ.ಎಂ. ನಟರಾಜ್ ಅವರು ಪುತ್ತೂರಿನವರು. ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ವಿಶೇಷ ಅಭಿಯೋಜಕರಾಗಿದ್ದರು. ನಟರಾಜ್ ಸಮರ್ಥ ವಾದವನ್ನು ಗಮನಿಸಿದ್ದ ಮೋದಿ ಸರ್ಕಾರ ಅಡಿಷನಲ್ ಸಾಲಿಸಿಟರ್ ಜನರಲ್ ದಕ್ಷಿಣ ಭಾರತಕ್ಕೆ ನೇಮಿಸಿತ್ತು. ನಂತರ ಇದೀಗ ಇಡಿ, ಐಟಿ, ಸಿಬಿಐ ಪ್ರಕರಣಗಳಿಗಾಗೆ ಅಡಿಷನಲ್ ಸಾಲಿಸಿಟರ್ ಜನರಲ್ ಸುಪ್ರೀಂಕೋರ್ಟ್ ಆಗಿ ನೇಮಕ ಮಾಡಲಾಗಿದೆ. ಇಡಿ, ಐಟಿ, ಸಿಬಿಐ ಕೇಸುಗಳ ವಾದ ಮಂಡನೆಯಲ್ಲಿ ನಟರಾಜ್ ಪ್ರಬಲ ವಕೀಲರು ಎನಿಸಿಕೊಂಡಿದ್ದಾರೆ. ಇಂದೂ ಕೂಡ ಡಿಕೆಶಿ ಪರ ವಕೀಲರಿಗೆ ಎದುರಾಗಿ ಸಮರ್ಥವಾಗಿ ವಾದ ಮಂಡಿಸಿ ಸೈ ಎನಿಸಿಕೊಂಡಿದ್ದಾರೆ.
2008ರಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಉಚ್ಛ ನ್ಯಾಯಾಲಯದ ವಿಶೇಷ ಅಭಿಯೋಜಕರಾಗಿ ಕಾರ್ಯನಿರ್ವಹಿಸಿದ ಕೆ.ಎಂ ನಟರಾಜ್, ದತ್ತ ಪೀಠ, ಚರ್ಚ್ಗಳ ಮೇಲಿನ ದಾಳಿ ಸೇರಿದಂತೆ ಹೈ ಟೆನ್ಷನ್ ಪ್ರಕರಣಗಳಲ್ಲಿ ಸರ್ಕಾರದ ಪರ ವಾದ ಮಂಡಿಸಿದ್ದರು.
ಹೀಗಾಗಿ ಇಂದು ಕೆ.ಎಂ.ನಟರಾಜ್, ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಅಕ್ರಮ ಹಣ ಸಾಗಾಣಿಕೆ ಪ್ರಕರಣದಲ್ಲಿ ಇಡಿ ಇಲಾಖೆಯ ಪರ ವಾದ ಮಂಡಿಸಿದ್ದಾರೆ. ಕೆ.ಎಂ.ನಟರಾಜ್ ಮಂಡಿಸಿದ ವಾದದ ಪರಿಣಾಮ ಅಜಯ್ಕುಮಾರ್ ಕುಹಾರ್ ನೇತೃತ್ವದ ಏಕಸದಸ್ಯ ಪೀಠ ಶಿವಕುಮಾರ್ರನ್ನು 9 ದಿನಗಳ ಕಾಲ ಇಡಿ ಅಧಿಕಾರಿಗಳ ಕಸ್ಟಡಿಗೆ ನೀಡಿ ಆದೇಶಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…