ಬೆಂಗಳೂರು: ಬಹುನಿರೀಕ್ಷಿತ ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ಬಹುತೇಕ ಅಂತಿಮಗೊಂಡಿದ್ದು, ಶುಕ್ರವಾರ ಅಧಿಕೃತ ಪ್ರಕಟಣೆ ಹೊರಬೀಳುವ ನಿರೀಕ್ಷೆಯಿದೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೆಸರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಂತಿಮಗೊಳಿಸಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತು ಗುರುವಾರ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ರಾಜ್ಯ ಉಸ್ತುವಾರಿ ಸಚಿವ ಕೆ.ಸಿ. ವೇಣುಗೋಪಾಲ್ ಸಭೆ ನಡೆಸಿದರು.
ಕೆಪಿಸಿಸಿ ಹೊಸ ಸಾರಥಿ ಆಯ್ಕೆ ವಿಚಾರ ಮಾಜಿ ಸಿಎಂ ಸಿದ್ದರಾಮಯ್ಯ ಬಣ ಹಾಗೂ ಮೂಲ ಕಾಂಗ್ರೆಸಿಗ ನಡುವೆ ಪ್ರತಿಷ್ಠೆಯಾಗಿ ಪರಿಣಮಿಸಿತ್ತು. ರಾಜ್ಯದಲ್ಲಿ ಪಕ್ಷದ ಮೇಲಿನ ಬಿಗಿ ಹಿಡಿತ ಮುಂದುವರಿಯಲು ತಮಗೆ ಆಪ್ತರಾದವರೇ ಗಾದಿ ಹಿಡಿಯಬೇಕು ಎಂದು ಸಿದ್ದರಾಮಯ್ಯ ಬಯಸಿದ್ದರು. ಮತ್ತೊಂದೆಡೆ, ಪಕ್ಷದ ಮೇಲೆ ಸಿದ್ದರಾಮಯ್ಯ ಪ್ರಾಬಲ್ಯ ತಗ್ಗಿಸಲು ಮೂಲ ಕಾಂಗ್ರೆಸಿಗರೇ ಆಗಬೇಕೆಂದು ಹಿರಿಯ ನಾಯಕರು ಪ್ರಯತ್ನ ನಡೆಸಿದ್ದರು.
ಉಪಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡಿದ್ದು, ಬಳಿಕ ಹಲವು ಮಂದಿ ಕೆಪಿಸಿಸಿ ಅಧ್ಯಕ್ಷರ ಸ್ಥಾನವನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಮುಂದಾಗಿದ್ದರು. ಆದರೆ ಅಂತಿಮವಾಗಿ ಎಐಸಿಸಿ ಡಿ.ಕೆ ಶಿವಕುಮಾರ್ ಆಯ್ಕೆ ಮಾಡಿದೆ ಎಂದು ಹೇಳಲಾಗಿದ್ದು, ಇಂದು ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…