ಡಿಕೆಶಿ ಪದಗ್ರಹಣ : ಪಟಾಕಿ ಸಿಡಿಸಿ ಸಂಭ್ರಮಿಸಿದ ಉಡುಪಿ ನಗರಸಭೆಯ ಮಾಜಿ ಸದಸ್ಯರು
ಉಡುಪಿ : ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ರವರ ಪದಗ್ರಹಣ ಪ್ರತಿಜ್ಞಾ ದಿನ ಕಾರ್ಯಕ್ರಮವನ್ನು ಉಡುಪಿ ನಗರಸಭೆಯ ಮಾಜಿ ಸದಸ್ಯರುಗಳು, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ ಬಳಿಯ ಫಿಷ್ ಹೌಸ್ ಹೋಟೆಲ್ ನ ಸಭಾಂಗಣದಲ್ಲಿ ವೀಕ್ಷಿಸಿ ಸಂಭ್ರಮಿಸಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಜಯವೀರ್ ಫೆಡ್ರಿಕ್ಸ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಚಾಲನೆಯನ್ನು ನೀಡಿದರು. ಕೆಪಿಸಿಸಿ ಸೂಚನೆಯಂತೆ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಯ ನಡುವೆ ಸಂವಿಧಾನದ ಪೀಠಿಕೆಯ ಪಠಣ ಮತ್ತು ಸಾಮೂಹಿಕ ಪ್ರತಿಜ್ಞೆಯನ್ನು ನಡೆಸಲಾಯಿತು. ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ತಿಳಿಸಿದಾಗ ಕಾರ್ಯಕರ್ತರು ಜಯಘೋಷ ಮೊಳಗಿಸಿದರು. ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತಿನ ಬಳಿಕ ನಗರಸಭಾ ಮಾಜಿ ಸದಸ್ಯರು ಸೇರಿದಂತೆ ಕಾರ್ಯಕರ್ತರು ಉದ್ಯಾವರ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ ಬಳಿ ಪಟಾಕಿ ಸಿಡಿಸಿ, ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಜಯಘೋಷ ಹಾಕಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾಜಿ ನಗರ ಸಭಾ ಸದಸ್ಯರಾದ ಶಶಿರಾಜ್ ಕುಂದರ್, ಸುಖೇಶ್ ಕುಂದರ್, ವಿಜಯ ಪೂಜಾರಿ ಮಂಚಿ, ಚಂದ್ರಕಾಂತ ನಾಯಕ್, ಉಡಪಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಅಮೀನ್ ಕಟ್ಟೆಗುಡ್ಡೆ, ಪ್ರದೀಪ್ ಕುಂಜಿಬೆಟ್ಟು, ಕಾಂಗ್ರೆಸ್ ಯುವ ಮುಖಂಡರುಗಳಾದ ನೀರಜ್ ಪಾಟೀಲ್, ಪ್ರಣಮ್ ಕಸ್ತೂರ್ಬ ನಗರ, ಸುದಾಕರ ಪೂಜಾರಿ ಪರ್ಕಳ, ಬೋನಿ ಪಾಯಸ್ ಸರಳೇಬೆಟ್ಟು, ಗಣೇಶ್ ಶೆಟ್ಟಿಬೆಟ್ಟು, ಅಶೋಕ್ ಕೆ.ಪಿ, ಹರೀಶ್ ನಾಯಕ್, ದಿನೇಶ್ ಪೂಜಾರಿ, ಅನಿಲ್ ಕುಮಾರ್, ಸುಪ್ರೀತ್ ಸುವರ್ಣ, ಪ್ರಸನ್ನ ಕುಮಾರ್, ಮೋಹನ್ ಸೋನ್ಸ್ , ಸಂದೇಶ್ ಪೂಜಾರಿ, ವಸಂತ ಕುಮಾರ್, ಚರಿತ್ ಪೂಜಾರಿ, ರಾಘು ಸನಿಲ್ ಕುತ್ಪಾಡಿ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…