ಡಿಕೆಶಿ ಪದಗ್ರಹಣ : ಪಟಾಕಿ ಸಿಡಿಸಿ ಸಂಭ್ರಮಿಸಿದ ಉಡುಪಿ ನಗರಸಭೆಯ ಮಾಜಿ ಸದಸ್ಯರು
ಉಡುಪಿ : ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ರವರ ಪದಗ್ರಹಣ ಪ್ರತಿಜ್ಞಾ ದಿನ ಕಾರ್ಯಕ್ರಮವನ್ನು ಉಡುಪಿ ನಗರಸಭೆಯ ಮಾಜಿ ಸದಸ್ಯರುಗಳು, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ ಬಳಿಯ ಫಿಷ್ ಹೌಸ್ ಹೋಟೆಲ್ ನ ಸಭಾಂಗಣದಲ್ಲಿ ವೀಕ್ಷಿಸಿ ಸಂಭ್ರಮಿಸಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಜಯವೀರ್ ಫೆಡ್ರಿಕ್ಸ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಚಾಲನೆಯನ್ನು ನೀಡಿದರು. ಕೆಪಿಸಿಸಿ ಸೂಚನೆಯಂತೆ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಯ ನಡುವೆ ಸಂವಿಧಾನದ ಪೀಠಿಕೆಯ ಪಠಣ ಮತ್ತು ಸಾಮೂಹಿಕ ಪ್ರತಿಜ್ಞೆಯನ್ನು ನಡೆಸಲಾಯಿತು. ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ತಿಳಿಸಿದಾಗ ಕಾರ್ಯಕರ್ತರು ಜಯಘೋಷ ಮೊಳಗಿಸಿದರು. ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತಿನ ಬಳಿಕ ನಗರಸಭಾ ಮಾಜಿ ಸದಸ್ಯರು ಸೇರಿದಂತೆ ಕಾರ್ಯಕರ್ತರು ಉದ್ಯಾವರ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ ಬಳಿ ಪಟಾಕಿ ಸಿಡಿಸಿ, ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಜಯಘೋಷ ಹಾಕಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾಜಿ ನಗರ ಸಭಾ ಸದಸ್ಯರಾದ ಶಶಿರಾಜ್ ಕುಂದರ್, ಸುಖೇಶ್ ಕುಂದರ್, ವಿಜಯ ಪೂಜಾರಿ ಮಂಚಿ, ಚಂದ್ರಕಾಂತ ನಾಯಕ್, ಉಡಪಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಅಮೀನ್ ಕಟ್ಟೆಗುಡ್ಡೆ, ಪ್ರದೀಪ್ ಕುಂಜಿಬೆಟ್ಟು, ಕಾಂಗ್ರೆಸ್ ಯುವ ಮುಖಂಡರುಗಳಾದ ನೀರಜ್ ಪಾಟೀಲ್, ಪ್ರಣಮ್ ಕಸ್ತೂರ್ಬ ನಗರ, ಸುದಾಕರ ಪೂಜಾರಿ ಪರ್ಕಳ, ಬೋನಿ ಪಾಯಸ್ ಸರಳೇಬೆಟ್ಟು, ಗಣೇಶ್ ಶೆಟ್ಟಿಬೆಟ್ಟು, ಅಶೋಕ್ ಕೆ.ಪಿ, ಹರೀಶ್ ನಾಯಕ್, ದಿನೇಶ್ ಪೂಜಾರಿ, ಅನಿಲ್ ಕುಮಾರ್, ಸುಪ್ರೀತ್ ಸುವರ್ಣ, ಪ್ರಸನ್ನ ಕುಮಾರ್, ಮೋಹನ್ ಸೋನ್ಸ್ , ಸಂದೇಶ್ ಪೂಜಾರಿ, ವಸಂತ ಕುಮಾರ್, ಚರಿತ್ ಪೂಜಾರಿ, ರಾಘು ಸನಿಲ್ ಕುತ್ಪಾಡಿ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…