ಡಿಕೆಶಿ ಪದಗ್ರಹಣ : ಪಟಾಕಿ ಸಿಡಿಸಿ ಸಂಭ್ರಮಿಸಿದ ಉಡುಪಿ ನಗರಸಭೆಯ ಮಾಜಿ ಸದಸ್ಯರು
ಉಡುಪಿ : ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ರವರ ಪದಗ್ರಹಣ ಪ್ರತಿಜ್ಞಾ ದಿನ ಕಾರ್ಯಕ್ರಮವನ್ನು ಉಡುಪಿ ನಗರಸಭೆಯ ಮಾಜಿ ಸದಸ್ಯರುಗಳು, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ ಬಳಿಯ ಫಿಷ್ ಹೌಸ್ ಹೋಟೆಲ್ ನ ಸಭಾಂಗಣದಲ್ಲಿ ವೀಕ್ಷಿಸಿ ಸಂಭ್ರಮಿಸಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಜಯವೀರ್ ಫೆಡ್ರಿಕ್ಸ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಚಾಲನೆಯನ್ನು ನೀಡಿದರು. ಕೆಪಿಸಿಸಿ ಸೂಚನೆಯಂತೆ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಯ ನಡುವೆ ಸಂವಿಧಾನದ ಪೀಠಿಕೆಯ ಪಠಣ ಮತ್ತು ಸಾಮೂಹಿಕ ಪ್ರತಿಜ್ಞೆಯನ್ನು ನಡೆಸಲಾಯಿತು. ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ತಿಳಿಸಿದಾಗ ಕಾರ್ಯಕರ್ತರು ಜಯಘೋಷ ಮೊಳಗಿಸಿದರು. ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತಿನ ಬಳಿಕ ನಗರಸಭಾ ಮಾಜಿ ಸದಸ್ಯರು ಸೇರಿದಂತೆ ಕಾರ್ಯಕರ್ತರು ಉದ್ಯಾವರ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ ಬಳಿ ಪಟಾಕಿ ಸಿಡಿಸಿ, ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಜಯಘೋಷ ಹಾಕಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾಜಿ ನಗರ ಸಭಾ ಸದಸ್ಯರಾದ ಶಶಿರಾಜ್ ಕುಂದರ್, ಸುಖೇಶ್ ಕುಂದರ್, ವಿಜಯ ಪೂಜಾರಿ ಮಂಚಿ, ಚಂದ್ರಕಾಂತ ನಾಯಕ್, ಉಡಪಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಅಮೀನ್ ಕಟ್ಟೆಗುಡ್ಡೆ, ಪ್ರದೀಪ್ ಕುಂಜಿಬೆಟ್ಟು, ಕಾಂಗ್ರೆಸ್ ಯುವ ಮುಖಂಡರುಗಳಾದ ನೀರಜ್ ಪಾಟೀಲ್, ಪ್ರಣಮ್ ಕಸ್ತೂರ್ಬ ನಗರ, ಸುದಾಕರ ಪೂಜಾರಿ ಪರ್ಕಳ, ಬೋನಿ ಪಾಯಸ್ ಸರಳೇಬೆಟ್ಟು, ಗಣೇಶ್ ಶೆಟ್ಟಿಬೆಟ್ಟು, ಅಶೋಕ್ ಕೆ.ಪಿ, ಹರೀಶ್ ನಾಯಕ್, ದಿನೇಶ್ ಪೂಜಾರಿ, ಅನಿಲ್ ಕುಮಾರ್, ಸುಪ್ರೀತ್ ಸುವರ್ಣ, ಪ್ರಸನ್ನ ಕುಮಾರ್, ಮೋಹನ್ ಸೋನ್ಸ್ , ಸಂದೇಶ್ ಪೂಜಾರಿ, ವಸಂತ ಕುಮಾರ್, ಚರಿತ್ ಪೂಜಾರಿ, ರಾಘು ಸನಿಲ್ ಕುತ್ಪಾಡಿ ಮುಂತಾದವರು ಉಪಸ್ಥಿತರಿದ್ದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…