Featured

ಡಿಕೆಶಿ ಬಂಧನಕ್ಕೆ ಬಿಜೆಪಿ ನಾಯಕರು ಯಾವತ್ತೂ ಸಂಭ್ರಮಾಚರಣೆ ಮಾಡಿಲ್ಲ , ಯಾವುದೇ ಪಕ್ಷದವರು ತಪ್ಪು ಮಾಡಿದ್ರೂ ಶಿಕ್ಷೆ ಆಗಲೇಬೇಕು : ಮಾಲೀಕಯ್ಯ ಗುತ್ತೇದಾರ್ -Vishwanews24

ಬೆಂಗಳೂರು: ಡಿಕೆಶಿ ಬಂಧನಕ್ಕೆ ಬಿಜೆಪಿ ನಾಯಕರು ಯಾವತ್ತೂ ಸಂಭ್ರಮಾಚರಣೆ ಮಾಡಿಲ್ಲ. ಯಾರು ತಪ್ಪು ಮಾಡಿರ್ತಾರೋ ಅವರಿಗೆ ಶಿಕ್ಷೆ ಆಗಲೇಬೇಕು. ಯಾವುದೇ ತಪ್ಪು ಮಾಡಿಲ್ಲ ಅಂದರೇ ಇಡಿ ಕೇಳಿರುವ ದಾಖಲೆಗಳನ್ನ ತೋರಿಸಲಿ. ಸಮರ್ಪಕವಾಗಿ ಉತ್ತರ ಕೊಟ್ಟು ಹೊರ ಬಂದರೆ ಡಿ.ಕೆ ಶಿವಕುಮಾರ್ ರನ್ನ ನಾವೂ ಸ್ವಾಗತಿಸುತ್ತೇವೆ ಎಂದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಹೇಳಿದರು.

ಪಿ.ಚಿದಂಬರಂ ಅವರು ಒಳ್ಳೆ ಹಣಕಾಸು ಸಚಿವ ಅಂತ ಹೆಸರಿತ್ತು. ಆದರೆ ಈಗ ಏನಾಗಿದೆ, ಎಷ್ಟೋ ಕೋಟ್ಯಾಂತರ ರೂಪಾಯಿ ಹಗರಣ ನಡೆದಿದೆ. ಈಗ ಕಾಂಗ್ರೆಸ್ ನವರು ಬಿಜೆಪಿ ಮೇಲೆ ಗೂಬೆ ಕೂರಿಸೋದು ಸರಿಯಲ್ಲ. ಯಾವುದೇ ಪಕ್ಷದವರು ತಪ್ಪು ಮಾಡಿದ್ರೂ ಶಿಕ್ಷೆ ಆಗಲೇಬೇಕು ಎಂದರು.

ಕೋಲಿ‌ ಸಮುದಾಯದ ಮುಖಂಡರಿಗೆ ಭರವಸೆ ನೀಡಿದ ಸಿಎಂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಮಾಲಿಕಯ್ಯ ಗುತ್ತೇದಾರ್, ಡಾ.ಎ.ಬಿ. ಮಾಲಕರೆಡ್ಡಿ ನೇತೃತ್ವದ ನಿಯೋಗವು ಕಲಬುರ್ಗಿ ಜಿಲ್ಲೆಯ ವಿವಿಧ ಸಮಸ್ಯೆ ಹಾಗೂ ಕೋಲಿ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರ್ಪಡೆ ಮಾಡುವ ಬಗ್ಗೆ ಚರ್ಚೆ ನಡೆಸಿತು.ಕೋಳಿ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಭರವಸೆ ನೀಡಿದರು.

ಬಿಜೆಪಿ ಶಿಸ್ತಿನ ಪಕ್ಷ. ಯಾವತ್ತೂ ಕೂಡ ಬಿಜೆಪಿ ಸೇಡಿನ ರಾಜಕಾರಣ ಮಾಡಿಲ್ಲ. ಯಾಕಾಗಿ ಕಾಂಗ್ರೆಸ್‌ನವರು ನಮ್ಮ ಮೇಲೆ ಆರೋಪ ಮಾಡ್ತಿದ್ದಾರೋ ಗೊತ್ತಿಲ್ಲ. ಡಿಕೆಶಿಯವರು ಹೊರಗೆ ಬರಲಿ ಅಂತ ದೇವರಲ್ಲಿ ಪ್ರಾರ್ಥಿಸುತ್ತೇನೆ. ಡಿಕೆಶಿ ನನಗೆ ಒಳ್ಳೆಯ ಸ್ನೇಹಿತರು. ಅವರ ಬಗ್ಗೆ ನನಗೆ ಗೌರವ ಇದೆ ಎಂದು ಸಚಿವ ವಿ. ಸೋಮಣ್ಣ ಹೇಳಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

1 hour ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

1 hour ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

2 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

2 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

2 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago