Featured

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ

ಬೆಂಗಳೂರು: ಡಿಕೆ ಶಿವಕುಮಾರ್‌ ಅವರು ಮನಸ್ಸು ಮಾಡಿದ್ರೆ, ಸ್ವಂತ ಹಣದಲ್ಲೇ ಸಾಲ ಮನ್ನಾ ಮಾಡಬಹುದು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರ ಸಾಲ ಮನ್ನಾಗೆ ಆಗ್ರಹಿಸಿದರು.

ಇದನ್ನೂ ಓದಿ: 

ಡಿಕೆ ಶಿವಕುಮಾರ್ ಅವರು ಮನಸು ಮಾಡಿದ್ರೆ, ತಮ್ಮ ಸ್ವಂತ ಹಣದಲ್ಲೇ ಸಾಲ ಮನ್ನಾ ಮಾಡಬಹುದು. ರೈತರು ಸಾಲಮನ್ನಾ ಆಗಬೇಕು ಅಂತ ಹೇಳ್ತಿದ್ದಾರೆ. ಸಿಎಂ ಕೂಡಾ ʻʻಸಿದ್ದರಾಮಯ್ಯ, ಕುಮಾರಸ್ವಾಮಿ ಕಾಲದಲ್ಲಿ ಸಾಲ ಮನ್ನಾ ಆಗಿದೆ. ನಾನು ಸಾಲಮನ್ನಾ ಮಾಡಿಲ್ಲ ಅಂದ್ರೆ 2028 ಚುನಾವಣೆಗೆ ಕಷ್ಟ ಆಗುತ್ತೆ ಅಂತ ಹೀಗಾಗಿ ದುಡ್ಡು ಹೊಂದಿಸಿʼʼ ಅಂತ ಹೇಳ್ತಾರೆ. ಡಿಕೆ ಶಿವಕುಮಾರ್ ಮನಸು ಮಾಡಿದ್ರೆ ಸಾಲ ಮನ್ನಾ ಮಾಡೋಕೆ ಆರ್ಥಿಕ ಇಲಾಖೆ ಬೇಕಿಲ್ಲ ಎಂದು ಕುಟುಕಿದರು.

ಬೆಂಗಳೂರು ಸುತ್ತಮುತ್ತ ಸಾವಿರಾರು ಕೋಟಿ ಆಸ್ತಿ ನುಂಗಲು ಹೊರಟಿದ್ದಾರೆ. ʻನೈಸ್ʼ ಹೆಸರಿನಲ್ಲಿ ಸಾವಿರಾರು ಕೋಟಿ ನುಂಗೋಕೆ ಹೊರಟಿದ್ದಾರೆ. ಮನಸ್ಸು ಮಾಡಿದ್ರೆ ಡಿಕೆಶಿ ತಮ್ಮ ಕೈಯಿಂದಲೇ ಸಾಲ ಮನ್ನಾ ಮಾಡಬಹುದು. ವೈಯಕ್ತಿಕವಾಗಿಯೇ ಸಾಲ ಮನ್ನಾ ಮಾಡಬಹುದು. ಇತ್ತೀಚೆಗೆ ಬಹಳ ಬದಲಾವಣೆ ಆಗಿರೋ ರೀತಿ ತೋರಿಸ್ತಾ ಇದ್ದಾರೆ. ಅದು ಕಾರ್ಯ ರೂಪಕ್ಕೆ ಇಲ್ಲಿವರೆಗೂ ಹಲವಾರು ರೀತಿ ಸಂಪಾದನೆ ಮಾಡಿರೋ ಹಣವನ್ನ ಜನರ ಪರವಾಗಿ ಕೊಟ್ಟರೆ 2028ಕ್ಕೂ, ಮುಂದೆಯೂ ನಾನೇ ಸಿಎಂ ಅಂತ ಹೇಳ್ತಾ ಇದ್ದಾರೆ. ಇದು ಮಾಡಿದ್ರೆ ಅದೂ ಆಗಬಹುದು ಎಂದು ಭವಿಷ್ಯ ನುಡಿದರು.

ಇದನ್ನೂ ಓದಿ: 

ಇನ್ನು ಸಾಲಮನ್ನಾಗೆ ಮೋದಿ ಸಹಕಾರ ಬೇಕು ಎಂದ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನು ಎರಡು ಬಾರಿ ಸಾಲಮನ್ನಾ ಮಾಡಿದಾಗ ಮೋದಿ, ಮನಮೋಹನ್ ಸಿಂಗ್ ಅವರ ಬಳಿ ಹಣ ಕೊಡಿ ಅಂತ ಕೇಳಿದ್ನಾ? ನಮ್ಮ ತೆರಿಗೆ ಹಣದಿಂದ ಸಾಲಮನ್ನಾ ಮಾಡಿದ್ದೇನೆ. ಪೊಳ್ಳು ಘೋಷಣೆಗಳನ್ನ ಸಿಎಂ ಮೊದಲು ಬಿಡಲಿ. ಎಷ್ಟು ಕೆಲಸ ಆಗುತ್ತೋ ಅಷ್ಟು ಸಾಲ ಮಾಡಿ ಎಂದು ಒತ್ತಾಯಿಸಿದರು.

Vishwa News 24

Recent Posts

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

15 minutes ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 hour ago

ತಿರುಮಲ ಬ್ರಹ್ಮೋತ್ಸವ ಸಂಭ್ರಮ : ಘಾಟ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರ ನಿಷೇಧ – vishwanews24

ತಿರುಮಲ ಬ್ರಹ್ಮೋತ್ಸವ ಸಂಭ್ರಮ : ಘಾಟ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರ ನಿಷೇಧ ತಿರುಪತಿ: ತಿರುಮಲದಲ್ಲಿ ವಾರ್ಷಿಕ ಸಲಕಟ್ಲ ಬ್ರಹ್ಮೋತ್ಸವದ…

2 hours ago

ಮಂಗಳೂರು:  ಜನಾರ್ದನ ಪೂಜಾರಿ ನಿವಾಸಕ್ಕೆ ಸಿಎಂ ಡಿ ಕೆ ಶಿವಕುಮಾರ್ ಭೇಟಿ – vishwanews24

ಮಂಗಳೂರು:  ಜನಾರ್ದನ ಪೂಜಾರಿ ನಿವಾಸಕ್ಕೆ ಸಿಎಂ ಡಿ ಕೆ ಶಿವಕುಮಾರ್ ಭೇಟಿ ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರದ…

2 hours ago

ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಅಂದಾಜು 10-15 ಲಕ್ಷ ರೂ. ನಷ್ಟ – vishwanews24

ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; 10-15 ಲಕ್ಷ ರೂ. ನಷ್ಟ ಉಡುಪಿ: ಕಾಪು ತಾಲೂಕಿನ ಕಟಪಾಡಿ ಸಮೀಪದ…

2 hours ago

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದ ಸಿಎಂ – vishwanews24

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 hours ago