ಬೆಂಗಳೂರು: ಅತೃಪ್ತರ ಮನವೊಲಿಕೆಗೆ ಮುಂಬೈಗೆ ತೆರಳಿರುವ ಡಿಕೆಶಿ ವಿರುದ್ಧ ಮಹಾರಾಷ್ಟ್ರ ಸರ್ಕಾರ ನಡೆದುಕೊಂಡ ರೀತಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟು ಮಾಡಿದೆ. ಈ ಕುರಿತು ಅಸಮಾಧಾನ ಹೊರ ಹಾಕಿರುವ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಯಾರನ್ನು ಕೇಳಿ ಮುಂಬೈಗೆ ಹೋದರು ಎಂದು ಆಪ್ತರ ಎದುರು ಅಸಮಾಧಾನ ಹೊರ ಹಾಕಿದ್ದಾರೆ ..
ಮುಂಬೈನಲ್ಲಿ ಡಿಕೆ ಶಿವಕುಮಾರ್ ಅವರನ್ನು ಹೋಟೆಲ್ ಒಳಗೂ ಸೇರಿಸಿಲ್ಲ, ಜತೆಗೆ ಅತೃಪ್ತ ಶಾಸಕರು ಮುಂಬೈ ಪೊಲೀಸ್ ಆಯುಕ್ತರಿಗೆ ಭದ್ರತೆ ನೀಡಿ ಎಂದು ಮನವಿ ಮಾಡಿದ್ದಾರೆ. ಇದೆಲ್ಲದರಿಂದ ಪಕ್ಷದ ವರ್ಚಸ್ಸಿಗೆ ತೊಂದರೆಯಾಗುತ್ತದೆ. ಹೀಗಿರುವಾಗ ಕೇವಲ ಮುಖ್ಯಮಂತ್ರಿಯ ಗಮನಕ್ಕೆ ತಂದು ಪಕ್ಷದ ನಾಯಕರಿಗೂ ಹೇಳದೇ ಹೋಗಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಭಿನ್ನಮತ ವ್ಯಕ್ತಪಡಿಸಿದ್ದಾರೆ .
ಸಭೆಯೊಂದರಲ್ಲಿ ಮಾತನಾಡಿದ ಸಿದ್ದರಾಮಯ್ಯ , ಪ್ರಸ್ತುತ ರಾಜಕೀಯ ಬೆಳವಣಿಗೆಗಳಿಗೆ ನಾನೇ ಕಾರಣ ಎಂಬಂತೆ ಕೆಲವರು ಆರೋಪಿಸುತ್ತಿದ್ದಾರೆ. ಆದರೆ ನಾನು ಮೊದಲಿನಿಂದಲೂ ಅತೃಪ್ತರನ್ನು ಮನವೊಲಿಸುವ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ. ನನ್ನ ಜವಾಬ್ದಾರಿಯನ್ನ ನಾನು ನಿಭಾಯಿಸಿದ್ದೇನೆ. ಕೆಲ ತಿಂಗಳ ಹಿಂದೆ ಬೆಳಗಾವಿ ಜಿಲ್ಲೆಯ ವಿಷಯದಲ್ಲಿ ಸಚಿವ ಡಿ.ಕೆ ಶಿವಕುಮಾರ್ ಮೂಗು ತೂರಿಸುತ್ತಿದ್ದಾರೆಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದರು. ಈ ವಿಚಾರವಾಗಿಯೂ ನನ್ನನ್ನು ದೂಷಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು..
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…