Featured

ಡಿಕೆ ಶಿವಕುಮಾರ್​ ಯಾರನ್ನು ಕೇಳಿ ಮುಂಬೈಗೆ ಹೋದರು ??: ಡಿ.ಕೆ ಶಿ ವಿರುದ್ದ ಸಿದ್ದರಾಮಯ್ಯ ಅಸಮಾಧಾನ -Vishwanews24

ಬೆಂಗಳೂರು: ಅತೃಪ್ತರ ಮನವೊಲಿಕೆಗೆ ಮುಂಬೈಗೆ ತೆರಳಿರುವ ಡಿಕೆಶಿ ವಿರುದ್ಧ ಮಹಾರಾಷ್ಟ್ರ ಸರ್ಕಾರ ನಡೆದುಕೊಂಡ ರೀತಿ ರಾಜ್ಯ ಕಾಂಗ್ರೆಸ್​ ನಾಯಕರಿಗೆ ಮುಜುಗರ ಉಂಟು ಮಾಡಿದೆ. ಈ ಕುರಿತು ಅಸಮಾಧಾನ ಹೊರ ಹಾಕಿರುವ ಸಿದ್ದರಾಮಯ್ಯ ಡಿಕೆ ಶಿವಕುಮಾರ್​ ಯಾರನ್ನು ಕೇಳಿ ಮುಂಬೈಗೆ ಹೋದರು ಎಂದು ಆಪ್ತರ ಎದುರು ಅಸಮಾಧಾನ ಹೊರ ಹಾಕಿದ್ದಾರೆ ..

ಮುಂಬೈನಲ್ಲಿ ಡಿಕೆ ಶಿವಕುಮಾರ್​ ಅವರನ್ನು ಹೋಟೆಲ್​ ಒಳಗೂ ಸೇರಿಸಿಲ್ಲ, ಜತೆಗೆ ಅತೃಪ್ತ ಶಾಸಕರು ಮುಂಬೈ ಪೊಲೀಸ್​ ಆಯುಕ್ತರಿಗೆ ಭದ್ರತೆ ನೀಡಿ ಎಂದು ಮನವಿ ಮಾಡಿದ್ದಾರೆ. ಇದೆಲ್ಲದರಿಂದ ಪಕ್ಷದ ವರ್ಚಸ್ಸಿಗೆ ತೊಂದರೆಯಾಗುತ್ತದೆ. ಹೀಗಿರುವಾಗ ಕೇವಲ ಮುಖ್ಯಮಂತ್ರಿಯ ಗಮನಕ್ಕೆ ತಂದು ಪಕ್ಷದ ನಾಯಕರಿಗೂ ಹೇಳದೇ ಹೋಗಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಭಿನ್ನಮತ ವ್ಯಕ್ತಪಡಿಸಿದ್ದಾರೆ .

ಸಭೆಯೊಂದರಲ್ಲಿ ಮಾತನಾಡಿದ ಸಿದ್ದರಾಮಯ್ಯ , ಪ್ರಸ್ತುತ ರಾಜಕೀಯ ಬೆಳವಣಿಗೆಗಳಿಗೆ ನಾನೇ ಕಾರಣ ‌ಎಂಬಂತೆ ಕೆಲವರು ಆರೋಪಿಸುತ್ತಿದ್ದಾರೆ. ಆದರೆ ನಾನು ಮೊದಲಿನಿಂದಲೂ ಅತೃಪ್ತರನ್ನು ಮನವೊಲಿಸುವ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ. ನನ್ನ ಜವಾಬ್ದಾರಿಯನ್ನ ನಾನು ನಿಭಾಯಿಸಿದ್ದೇನೆ. ಕೆಲ ತಿಂಗಳ ಹಿಂದೆ ಬೆಳಗಾವಿ ಜಿಲ್ಲೆಯ ವಿಷಯದಲ್ಲಿ ಸಚಿವ ಡಿ.ಕೆ ಶಿವಕುಮಾರ್​ ಮೂಗು ತೂರಿಸುತ್ತಿದ್ದಾರೆಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದರು. ಈ ವಿಚಾರವಾಗಿಯೂ ನನ್ನನ್ನು ದೂಷಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು..

 

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

17 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

17 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

18 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

19 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

19 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

19 hours ago